ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಅತಿಥಿಗಳಾಗಿ ಆಗಮಿಸಿದ್ದ ದಿವ್ಯಶ್ರೀ ಜಿ. ನಾಯ್ಕ್ ಹಾಗೂ ವಿದ್ಯಾಲಯದ ಉಪಪ್ರಾಂಶುಪಾಲ ದಿನೇಶ್ ಅವರು ಗಿಡ ನೆಡುವ ಹಾಗೂ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಇದನ್ನೂ ಓದಿ: ಬಿಜೆಪಿ ಶಾಸಕ ಶರಣು ಸಲಗಾರ್ಗೆ ‘ನಾನ್ಬೈಲೆಬಲ್ ವಾರಂಟ್’ ಶಾಕ್!: ಯಾವುದೇ ಕ್ಷಣದಲ್ಲೂ ಬಂಧನ ಸಾಧ್ಯತೆ
ಈ ಸಂದರ್ಭದಲ್ಲಿ ಮಾತನಾಡಿದ ದಿವ್ಯಶ್ರೀ ಜಿ. ನಾಯ್ಕ್ ಅವರು ಪರಿಸರ ಸಂರಕ್ಷಣೆಯ ಮಹತ್ವ, ಪರಿಸರ ಸಮತೋಲನ ಕಾಪಾಡುವ ಅಗತ್ಯತೆ ಹಾಗೂ ಇಂದಿನ ದಿನಗಳಲ್ಲಿ ಪರಿಸರ ರಕ್ಷಣೆಯ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂಬ ವಿಷಯವನ್ನು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ವಿವರಿಸಿದರು.
ವಿದ್ಯಾರ್ಥಿನಿ ಕೃತಿಕಾ ಕಾರ್ಯಕ್ರಮ ನಿರೂಪಿಸಿದರೆ, ಶ್ರೇಯ ವಂದನಾರ್ಪಣೆಗೈದರು.
ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ


