ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನಲ್ಲಿ ಮಹಿಳೆಯೊಬ್ಬರ ಮೇಲೆ ಮಾದಕ ದ್ರವ್ಯ ನೀಡಿ ಸಾಮೂಹಿಕ ಅತ್ಯಾಚಾರ ಎಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಬದುಕುಳಿದ ಮಹಿಳೆ ದಿನಗೂಲಿ ಕೆಲಸ ಮಾಡುತ್ತಿದ್ದು, ಆ ಪ್ರದೇಶದ ಬಾಳೆ ತೋಟದೊಳಗೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ.
ಆಹಾರ ಮತ್ತು ಜ್ಯೂಸ್ ನೀಡುವುದಾಗಿ ಹೇಳಿ ಪುರುಷರ ಗುಂಪೊಂದು ಮಹಿಳೆಯನ್ನು ಮರುಳು ಮಾಡಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಇದನ್ನು ನಂಬಿದ ಮಹಿಳೆ ಅವರೊಂದಿಗೆ ವಾಹನ ಹತ್ತಿ ಗ್ರಾಮದ ಬಳಿಯ ಜಮೀನಿಗೆ ಕರೆದೊಯ್ಯಲಾಯಿತು. ಈ ತಂಪು ಪಾನೀಯದಲ್ಲಿ ನಿದ್ರಾಜನಕ ಬೆರೆಸಲಾಗಿದೆ ಎಂದು ಶಂಕಿಸಲಾಗಿದೆ, ಇದನ್ನು ನೀಡಿದ ನಂತರ ಆಕೆ ಪ್ರಜ್ಞೆ ತಪ್ಪಿದ್ದಾಳೆ ಎಂದು ಹೇಳಲಾಗಿದೆ.
ಪ್ರಜ್ಞೆ ತಪ್ಪಿದ ನಂತರ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದನ್ನು ಆ ಪುರುಷರು ತಮ್ಮ ಫೋನ್ನಲ್ಲಿ ರೆಕಾರ್ಡ್ ಮಾಡಿದ್ದಾರೆ. ಒಂದು ವೇಳೆ ಈ ಬಗ್ಗೆ ಯಾರಿಗಾದರೂ ಹೇಳಿದ್ರೆ ಇದನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಅದರೂ ಈ ಪುರುಷರು ಆಕೆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಹಿಳೆ ಬಸವಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಭಾಗಹಿಯಾಗಿರುವ 19ರಿಂದ 29 ವರ್ಷದೊಳಗಿನ ಯುವಕರು ಎಂದು ಹೇಳಲಾಗಿದೆ. ಇದೀಗ ಅವರನ್ನು ಬಂಧನ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


