ದೆಹಲಿಯಲ್ಲಿ ಭೀಕರ ಕಾರು ಅಪಘಾತ: ಆರ್ಮಿ ಅಧಿಕಾರಿಯ ಪುತ್ರ ಸಾವು

ನವದೆಹಲಿ: ನೈಋತ್ಯ ದೆಹಲಿಯ ವಸಂತ್ ಕುಂಜ್ (Vasant Kunj) ಪ್ರದೇಶದ ನಂಗಲ್ ದೇವಾಟ್ ಸಿಗ್ನಲ್ ಬಳಿ ಶುಕ್ರವಾರ ಬೆಳಗಿನ ಜಾವ ಕಾರು ಚರಂಡಿಗೆ ಬಿದ್ದು ಪಲ್ಟಿಯಾದ ಪರಿಣಾಮ, ಭಾರತೀಯ ಭೂಸೇನೆಯ (Indian Army) ಅಧಿಕಾರಿಯೊಬ್ಬರ ಪುತ್ರ ದಾರುಣವಾಗಿ ಸನ್ನಿವೇಶದಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ.

ಮೃತ ಯುವಕನನ್ನು ಯಶ್ವೇಂದ್ರ ಎಂದು ಗುರುತಿಸಲಾಗಿದೆ. ಅಮೆರಿಕದಲ್ಲಿ (US) ಉನ್ನತ ಶಿಕ್ಷಣ ಪಡೆಯುತ್ತಿದ್ದ ಯಶ್ವೇಂದ್ರ, ರಜೆಯ ನಿಮಿತ್ತ ಭಾರತಕ್ಕೆ ಆಗಮಿಸಿದ್ದರು.

ಜುಲೈ 24ರ ಶುಕ್ರವಾರ ಬೆಳಿಗ್ಗೆ ಸುಮಾರು 6 ಗಂಟೆಯ ವೇಳೆಗೆ ಯಶ್ವೇಂದ್ರ ಹಾಗೂ ಅವರ ಸಹಪಾಠಿ ಯುವತಿ, ಗೆಳೆಯನ ಮನೆಯಲ್ಲಿ ರಾತ್ರಿ ತಂಗಿದ ನಂತರ ವಸಂತ್ ಕುಂಜ್‌ನಲ್ಲಿರುವ ಯುವತಿಯ ಮನೆಗೆ ಕಾರಿನಲ್ಲಿ ಹಿಂತಿರುಗುತ್ತಿದ್ದರು.

ನಂಗಲ್ ದೇವಾಟ್ ಟ್ರಾಫಿಕ್ ಸಿಗ್ನಲ್ ಬಳಿ ತೀಕ್ಷ್ಣವಾದ ತಿರುವು (Sharp turn) ತೆಗೆದುಕೊಳ್ಳುವಾಗ, ಮಳೆಯಿಂದಾಗಿ ರಸ್ತೆ ಜಾರುತ್ತಿದ್ದ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ತೆರೆದ ಚರಂಡಿಗೆ ಬಿದ್ದು ಪಲ್ಟಿಯಾಗಿದೆ.

ಇದನ್ನೂ ಓದಿ:Accident : ಕಾರು-ಟ್ರಕ್ ಭೀಕರ ಅಪಘಾತದಲ್ಲಿ ಮಾಜಿ ಗೃಹ ಸಚಿವರ ಪುತ್ರಿ ಸೇರಿ ಮೂವರ ದುರ್ಮರಣ

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಯಶ್ವೇಂದ್ರ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಯುವತಿಯು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Leave a Reply

Your email address will not be published. Required fields are marked *