Breaking News

ಮಂಡ್ಯ ಬಳಿ ಖಾಸಗಿ ಬಸ್ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಮಂಡ್ಯ: ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಖಾಸಗಿ ಐಷಾರಾಮಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಹೈವೇ ಸೂಚನಾ ಫಲಕಕ್ಕೆ (ಸೈನ್‌ಬೋರ್ಡ್) ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ನಾಗಮಂಗಲ ತಾಲೂಕಿನ ಲ್ಯಾಂಕೋ ಟೋಲ್ ಗೇಟ್ ಸಮೀಪ ಸಂಭವಿಸಿದೆ.

‘ಸುಗಮ ಟ್ರಾವೆಲ್ಸ್’ (Sugama Travels) ಸಂಸ್ಥೆಗೆ ಸೇರಿದ ಖಾಸಗಿ ಐಷಾರಾಮಿ ಬಸ್ ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮೃತರನ್ನು ಬೆಂಗಳೂರು ಮೂಲದ ಓರ್ವ ಪ್ರಯಾಣಿಕ ಹಾಗೂ ಬಸ್‌ನ ಕ್ಲೀನರ್ (ನಿರ್ವಾಹಕ) ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ಡ್ಯಾನ್ಸ್ ಚಿತ್ರೀಕರಣದಲ್ಲಿ ರಶ್ಮಿಕಾ ಮಂದಣ್ಣಗೆ ಅಪರೂಪದ ಹಿಪ್ ಇಂಜುರಿ! ರಣಬಾಳಿ ಅಥವಾ ಮೈಸಾ ಶೂಟಿಂಗ್‌ ವಿಳಂಬ

Video:

ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣವೇ ಬೆಳ್ಳೂರಿನ ಐಐಎಂಎಸ್ (AIIMS Bellur) ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಸುದ್ದಿ ತಿಳಿಯುತ್ತಿದ್ದಂತೆ ನಾಗಮಂಗಲ ವ್ಯಾಪ್ತಿಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *