ಬೆಂಗಳೂರು: ಉತ್ತರಾಖಂಡದ ಹಲ್ದ್ವಾನಿಯಲ್ಲಿ (Haldwani) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ಸಮಾವೇಶದ ನಂತರ ನಡೆದ ‘ಶುದ್ಧೀಕರಣ’ (Purification) ಕೃತ್ಯದ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಎಫ್ಐಆರ್ (FIR) ದಾಖಲಿಸಿರುವುದನ್ನು ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ
ಈ ‘ಶುದ್ಧೀಕರಣ’ ಕೃತ್ಯವು ಅಸ್ಪೃಶ್ಯತೆ ಹಾಗೂ ಜಾತಿ ತಾರತಮ್ಯದ ಗಂಭೀರ ಪ್ರಶ್ನೆಗಳನ್ನು ಎತ್ತುತ್ತದೆ. ಈ ಕೃತ್ಯ ಎಸಗಿದವರ ವಿರುದ್ಧ ಸಂಬಂಧಪಟ್ಟ ಸರ್ಕಾರ ತಕ್ಷಣವೇ ಎಫ್ಐಆರ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.
An FIR against LoP Shri @RahulGandhi Ji for speaking against an act of ‘purification’ following Shri Mallikarjun @kharge ji’s rally in Haldwani is deeply condemnable.
The act of ‘purification’ itself raises serious concerns about untouchability and caste discrimination. The…
— DK Shivakumar (@DKShivakumar) August 31, 2026
ಅಸ್ಪೃಶ್ಯತೆ ಮತ್ತು ಜಾತಿ ತಾರತಮ್ಯದ ವಿರುದ್ಧ ಧ್ವನಿ ಎತ್ತಿದಾಗ, ಅದನ್ನು ಪ್ರಶ್ನಿಸಿದವರನ್ನೇ ಗುರಿಯಾಗಿಸುವುದು ಸರಿಯಾದ ಕ್ರಮವಲ್ಲ. ಬದಲಿಗೆ ತಾರತಮ್ಯ ಎಸಗಿದವರನ್ನು ಪ್ರಶ್ನಿಸಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು.
ಭಾರತೀಯ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಗೌರವ ಮತ್ತು ನ್ಯಾಯದ ಭರವಸೆಯನ್ನು ನೀಡಿದೆ. ನ್ಯಾಯಕ್ಕಾಗಿ ಧ್ವನಿ ಎತ್ತುವವರನ್ನು ಮೌನಗೊಳಿಸುವುದರಿಂದ ಈ ಸಂವಿಧಾನಾತ್ಮಕ ಮೌಲ್ಯಗಳನ್ನು ರಕ್ಷಿಸಲು ಸಾಧ್ಯವಿಲ್ಲ.
ಇದನ್ನೂ ಓದಿ: “ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ನನಗೆ ಹಜ್ ಯಾತ್ರೆಗೆ ಹೋಗುವ ಆಸೆ ಇದೆ”: ಸಚಿವ ಬಸವರಾಜ ರಾಯರೆಡ್ಡಿ
ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಿಸಲಾಗಿರುವ ಎಫ್ಐಆರ್ ಅನ್ನು ತೀವ್ರವಾಗಿ ಖಂಡಿಸಲಾಗಿದ್ದು, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಪಕ್ಷವು ದೃಢವಾಗಿ ನಿಲ್ಲಲಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಕಾಂಗ್ರೆಸ್ ಪಕ್ಷವು ಪ್ರತಿಯೊಂದು ಮಾದರಿಯ ಜಾತಿ ತಾರತಮ್ಯದ ವಿರುದ್ಧ ನಿರಂತರವಾಗಿ ಹೋರಾಡಲಿದ್ದು, ಸಂವಿಧಾನಾತ್ಮಕ ಸಮಾನತೆ, ಗೌರವ ಹಾಗೂ ಸಾಮಾಜಿಕ ನ್ಯಾಯದ ಭರವಸೆಯನ್ನು ಎತ್ತಿಹಿಡಿಯಲು ಶ್ರಮಿಸಲಿದೆ ಎಂದು ನಾಯಕರು ತಿಳಿಸಿದ್ದಾರೆ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

