ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಗರದ ಹೊಸೂರು ರಸ್ತೆಯ ಲ್ಯಾಂಗ್ಫೋರ್ಡ್ ಟೌನ್ನಲ್ಲಿರುವ ಕಚೇರಿಯಲ್ಲಿ ನಡೆದಿದೆ. ಸ್ಥಳಕ್ಕೆ ಅಶೋಕ್ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆನೇಕಲ್ನ ನಾರಾಯಣ ಆಸ್ಪತ್ರೆಗೆ ಸಿಜೆ ರಾಯ್ ಶವ ರವಾನಿಸಲಾಗಿದೆ.
ಸಿ.ಜೆ.ರಾಯ್ ಅವರು ಕಾನ್ಫಿಡೆಂಟ್ ಗ್ರೂಪ್ ಎಂಬ ರಿಯಲ್ ಎಸ್ಟೇಟ್ ಕಂಪನಿಯನ್ನು ಹುಟ್ಟುಹಾಕಿದ್ದರು. ಪದೇ ಪದೆ ಐಟಿ ಇಲಾಖೆ ಅಧಿಕಾರಿಗಳ ದಾಳಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಕೂಡ IT ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಪಿಸ್ತೂಲ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Shocking: ಚರಂಡಿ ನೀರಿನಲ್ಲಿ ತಟ್ಟೆ ತೊಳೆಯುತ್ತಿರುವ ಮಕ್ಕಳು!
ಹೊಸೂರು ರಸ್ತೆಯ ಲ್ಯಾಂಗ್ಫೋರ್ಡ್ ಟೌನ್ನಲ್ಲಿರುವ ಕಚೇರಿ ಮೇಲೆ IT ಇಲಾಖೆ ಅಧಿಕಾರಿಗಳು ಇಂದು ಬೆಳಗ್ಗೆ ಕೂಡ ದಾಳಿ ಮಾಡಿದ್ದರು. ಮಧ್ಯಾಹ್ನ ಕಚೇರಿಗೆ ಬಂದಿದ್ದ ಉದ್ಯಮಿ ಸಿ.ಜೆ.ರಾಯ್, ಒಂದು ಗಂಟೆ ಐಟಿ ವಿಚಾರಣೆ ಎದುರಿಸಿದ್ದಾರೆ. ಅಧಿಕಾರಿಗಳಿಗೆ ಕೆಲ ದಾಖಲೆ ಸಹ ಕೊಟ್ಟಿದ್ದಾರೆ. ಮತ್ತಷ್ಟು ದಾಖಲೆ ತರಲು ರೂಂಗೆ ಹೋಗಿದ್ದು, ಈ ವೇಳೆ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡಿದ್ದಾರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಿ.ಜೆ.ರಾಯ್ ಕೊನೆಯುಸಿರೆಳೆದಿದ್ದಾರೆ.
ಖುದ್ದು ಡಿಸಿಪಿ ಅಕ್ಷಯ್ ಅವರು ತನಿಖೆ ನಡೆಸಿದ್ದು, ಈಗಾಗಲೇ ಫೈರ್ ಮಾಡಿಕೊಂಡ ಪಿಸ್ತೂಲ್ ವಶಕ್ಕೆ ಪಡೆದುಕೊಂಡಿದ್ದಾರೆ. ಕಚೇರಿ ಕೊಠಡಿಯಲ್ಲಿನ ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಯಾವುದಾದರೂ ಡೆತ್ ನೋಟ್ ಇದೆಯಾ ಅಥವಾ ಮೊಬೈಲ್ನಲ್ಲಿ ಏನಾದ್ರೂ ಇದೆಯಾ ಅಥವಾ ಯಾರಿಗಾದ್ರೂ ಮೆಸೇಜ್ ಮಾಡಿದ್ದರಾ ಎಂದು ಎಲ್ಲಾ ಆಯಾಮಗಳಲ್ಲಿ ಪರಿಶೀಲನೆ ಮಾಡಲಾಗುತ್ತಿದೆ.
ಕೇರಳ ಮೂಲದ ಸಾಮಾನ್ಯ ವ್ಯಕ್ತಿಯಾಗಿದ್ದ ಸಿಜೆ ರಾಯ್, 1997ರಲ್ಲಿ ಹೆಚ್ಪಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಬಳಿಕ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ತದನಂತರ ಕಾನ್ಫಿಡೆಂಟ್ ಗ್ರೂಪ್ ಎಂಬ ಸಾಮ್ರಾಜ್ಯ ಕಟ್ಟಿದ್ದೇ ರೋಚಕ. 30,40 ಸೈಟ್ನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಶುರು ಮಾಡಿ, ಸದ್ಯ 1 ಸಾವಿರ ಎಕರೆ ಭೂಮಿ ಹೊಂದಿದ್ದರು.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

