ಧಾರವಾಡ: ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಮಕ್ಕಳು ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡದ ಕೋಳಿಕೆರೆ ಬಡಾವಣೆಯಲ್ಲಿ ನಡೆದಿದೆ.
ಇಸ್ಮಾಯಿಲ್ ಎಂಬವರ ಮನೆಯಲ್ಲಿ ಈ ಸಿಲಿಂಡರ್ ಸ್ಫೋಟ ಸಂಭವಿಸಿ ಬೆಂಕಿ ಧಗಧಗಿಸಿದೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ವಿದ್ಯಾಗಿರಿ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮನೆ ಗೋಡೆಗಳಿಗೆ ಹಾನಿ
ಸಿಲಿಂಡರ್ ಸ್ಫೋಟದ ರಭಸಕ್ಕೆ ಮನೆಯ ಗೋಡೆಗಳು ಪುಡಿ ಪುಡಿಯಾಗಿದ್ದು, ಗೃಹೋಪಯೋಗಿ ವಸ್ತುಗಳೂ ಹಾನಿಯಾಗಿವೆ.

