Breaking: ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿಯನ್ನು ನಿನ್ನೆಯ ದಿನ ಮೂವರು ಕಾರಿನಲ್ಲಿ ಮುಸುಕುಧಾರಿಗಳು ಕಿಡ್ನಾಪ್ ಮಾಡಲು ಪ್ರಯತ್ನಿಸಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಸಂಬಂಧಿಸಿದಂತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.

ಬೆಳ್ತಂಗಡಿ ನಗರದ ಸುದೇಮುಗೇರು ಎಂಬಲ್ಲಿ ಫೆ.9 ರಂದು ಬೆಳಗ್ಗೆ ಎಂದಿನಂತೆ 16 ವರ್ಷದ ಕಾಲೇಜ್ ವಿದ್ಯಾರ್ಥಿನಿ 8:30 ಕ್ಕೆ ತಂದೆಯ ಸ್ಕೂಟರ್ ನಲ್ಲಿ ಪ್ರಯಾಣ ಮಾಡುವಾಗ ಓಮಿನಿ ಕಾರಿನಲ್ಲಿ ಬಂದ ಮೂವರು ಕಿಡ್ನಾಪ್ ಮಾಡಲು ಯತ್ನಿಸಿ ಚೂರಿ ಇರಿದು ಪರಾರಿಯಾಗಿದ್ದರು ಎಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ದೂರು ನೀಡಿದ್ದರು.

Advertisement

ಇದನ್ನೂ ಓದಿ: ಚಿನ್ನದ ಗ್ರಾಹಕರಿಗೆ ಗುಡ್​​​ ನ್ಯೂಸ್​​: ಇಂದು ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ

ದೂರು ದಾಖಲಿಸಿಕೊಂಡ ಬೆಳ್ತಂಗಡಿ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಓಮಿನಿ ಕಾರು ಪತ್ತೆಯಾಗಿರಲಿಲ್ಲ, ವಿಚಾರಣೆ ಮುಂದುವರೆಸಿದ ಬೆಳ್ತಂಗಡಿ ಪೊಲೀಸರು ಒಂದೇ ದಿನದಲ್ಲಿ ಕಿಡ್ನಾಪ್, ಚೂರಿ ಇರಿತ ಡ್ರಾಮ ಪ್ರಕರಣ ಬೆಳಕಿಗೆ ತಂದಿದ್ದಾರೆ. ಕಾಲೇಜ್ ಗೆ ಹೋಗಲು ಇಷ್ಟ ಇಲ್ಲದ ಕಾರಣದಿಂದ ತಾನೇ ಬ್ಲಡ್ ನಿಂದ ಇರಿದು ಡ್ರಾಮ ಮಾಡಿಕೊಂಡಿದ್ದಾಳೆ ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ.

Advertisement

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು