ಮಂಗಳೂರು: ಅನ್ಯಕೋಮಿನ ಯುವಕ ಮೊಹಮ್ಮದ್ ಮಿದ್ಲಾಜ್ ಜತೆಗೆ ಹಿಂದೂ ಯುವತಿ ಪರಾರಿ

ಮಂಗಳೂರಿನ ಸುರತ್ಕಲ್‌ನಲ್ಲಿ ಅನ್ಯಕೋಮಿನ ಯುವಕನೊಂದಿಗೆ ಯುವತಿಯೊಬ್ಬಳು ಪರಾರಿಯಾಗಿರುವ ಘಟನೆ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಕಾಸರಗೋಡು ಮೂಲದ ಆರ್‌ಡಿ ನಗರದ ಮೀಪುಗುರಿ ನಿವಾಸಿ ವೈಶಾಲಿ (23) ಎಂಬಾಕೆ ಕೇರಳ ಮೂಲದ ಮೊಹಮ್ಮದ್ ಮಿದ್ಲಾಜ್ ಪಿ.ಹೆಚ್. ಎಂಬಾತನೊಂದಿಗೆ ಪರಾರಿಯಾದವಳು.

ಮಂಗಳೂರಿನ ಸುರತ್ಕಲ್‌ನಲ್ಲಿರುವ ಮುಕ್ಕ ಕಾಲೇಜಿನಲ್ಲಿ ವೈಶಾಲಿ ಕ್ರಿಮಿನಾಲಜಿ (Criminology) ವ್ಯಾಸಂಗ ಮಾಡುತ್ತಿದ್ದಳು.

Advertisement

ಈ ಜೋಡಿಯು ಜನವರಿ 31ರಂದೇ ಕೇರಳದ ವಯನಾಡ್ ರಿಜಿಸ್ಟರ್ ಆಫೀಸಿನಲ್ಲಿ ಗುಟ್ಟಾಗಿ ವಿವಾಹ ನೋಂದಣಿ ಮಾಡಿಸಿಕೊಂಡಿದ್ದಾರೆ. ಫೆಬ್ರವರಿ 9ರಂದು ವೈಶಾಲಿ ತಾನು ವಾಸ್ತವ್ಯವಿದ್ದ ಪಿಜಿಯಿಂದ (PG) ಹೊರಗೆ ಹೋಗಿದ್ದಾಳೆ. ಪೋಷಕರು ಹುಡುಕಾಡಿದಾಗ ಪಿಜಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಆಕೆ ತೆರಳುತ್ತಿರುವ ದೃಶ್ಯ ಸೆರೆಯಾಗಿದೆ.

ಮಗಳು ಮನೆಗೆ ಬಾರದೆ ಮತ್ತು ಫೋನ್ ಸಂಪರ್ಕಕ್ಕೂ ಸಿಗದ ಕಾರಣ ಆತಂಕಗೊಂಡ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಗಳನ್ನು ಮಿದ್ಲಾಜ್ ಎಂಬಾತ ಕರೆದುಕೊಂಡು ಹೋಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Advertisement

ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಯುವಕ ಮತ್ತು ಯುವತಿಯ ಪತ್ತೆಗಾಗಿ ತನಿಖೆ ಆರಂಭಿಸಿದ್ದಾರೆ. ಇಬ್ಬರೂ ಈಗಾಗಲೇ ಮದುವೆಯಾಗಿರುವುದಾಗಿ ದಾಖಲೆಗಳು ಸಿಕ್ಕಿರುವುದರಿಂದ, ಪೊಲೀಸರು ಕಾನೂನಾತ್ಮಕವಾಗಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಪುತ್ತೂರಿನ ಯುವಕ ಸಾವು

ಮಂಗಳೂರಿನಂತಹ ಸೂಕ್ಷ್ಮ ಪ್ರದೇಶದಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಿ ಸದ್ದು ಮಾಡುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪರಿಸ್ಥಿತಿಯ ಮೇಲೆ ನಿಗಾ ಇಡಲಾಗಿದೆ. ಇಬ್ಬರೂ ಕೇರಳ ಮೂಲದವರಾಗಿರುವುದರಿಂದ, ಸುರತ್ಕಲ್ ಪೊಲೀಸರು ಕೇರಳ ಪೊಲೀಸರ ಸಹಾಯದೊಂದಿಗೆ ಅವರ ಪ್ರಸ್ತುತ ಮೊಬೈಲ್ ಲೊಕೇಶನ್ ಪತ್ತೆಹಚ್ಚಲು ಮುಂದಾಗಿದ್ದಾರೆ.

ಯುವತಿ ಮೇಜರ್ (23 ವರ್ಷ) ಆಗಿರುವುದರಿಂದ, ಆಕೆಯನ್ನು ಪತ್ತೆಹಚ್ಚಿದ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದೆ. ಆಕೆ ತನ್ನ ಸ್ವಇಚ್ಛೆಯಿಂದ ಹೋಗಿದ್ದೇನೆಯೇ ಅಥವಾ ಬಲವಂತದಿಂದ ಕರೆದೊಯ್ಯಲಾಗಿದೆಯೇ ಎಂಬುದನ್ನು ಆಕೆಯೇ ಹೇಳಬೇಕಾಗಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು