ಬೆಂಗಳೂರು: ರಾಜ್ಯದ ಜನತೆ ಸದ್ಯ ತೀವ್ರ ಬಿಸಿಲಿನ ತಾಪದಿಂದ ಕಂಗಾಲಾಗಿದ್ದಾರೆ. ಆದರೆ, ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದು, ಈ ಮೂಲಕ ವರುಣನ ಎಂಟ್ರಿಯ ಮುನ್ಸೂಚನೆ ನೀಡಿದೆ. ಮುಂದಿನ 3 ಗಂಟೆಗಳ ಕಾಲ ಆಯ್ದ ಜಿಲ್ಲೆಗಳಲ್ಲಿ ಜಾಗರೂಕರಾಗಿರಲು ಸೂಚಿಸಲಾಗಿದೆ.
ಎಲ್ಲೋ ಅಲರ್ಟ್ ಘೋಷಿಸಲಾದ ಜಿಲ್ಲೆಗಳು:

ಹವಾಮಾನ ಇಲಾಖೆಯ ಪ್ರಕಾರ, ಈ ಕೆಳಗಿನ 5 ಜಿಲ್ಲೆಗಳಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ:
ದಕ್ಷಿಣ ಕನ್ನಡ
ಉಡುಪಿ
ಕೊಡಗು
ಚಿಕ್ಕಮಗಳೂರು
ಶಿವಮೊಗ್ಗ
ಇದನ್ನೂ ಓದಿ: ಬೆಳ್ತಂಗಡಿ: ಚಲಿಸುತ್ತಿದ್ದ ಆಂಬ್ಯುಲೆನ್ಸ್ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ
ಮಳೆ ಬರುವ ವೇಳೆ ಗುಡುಗು ಮತ್ತು ಮಿಂಚಿನ ತೀವ್ರತೆ ಹೆಚ್ಚಿರಲಿದ್ದು, ಸಾರ್ವಜನಿಕರು ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಎಚ್ಚರಿಕೆ ನೀಡಲಾಗಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮಳೆಯ ಮುನ್ಸೂಚನೆ ಇರುವುದರಿಂದ ರೈತರು ತಮ್ಮ ಬೆಳೆ ಮತ್ತು ರಾಶಿಯನ್ನು ಸುರಕ್ಷಿತವಾಗಿರಿಸಿಕೊಳ್ಳಲು ಸೂಚಿಸಲಾಗಿದೆ.ಬೆಂಗಳೂರಿನಲ್ಲಿ ಸದ್ಯಕ್ಕೆ ಮೋಡಕವಿದ ವಾತಾವರಣ ಕಂಡುಬರಲಿದ್ದು, ನಗರದ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ತಾಪಮಾನದಲ್ಲಿ ಸ್ವಲ್ಪ ಇಳಿಕೆಯಾಗುವ ಸಾಧ್ಯತೆ ಇರುವುದರಿಂದ ನಗರವಾಸಿಗಳಿಗೆ ಬಿಸಿಲಿನಿಂದ ಕೊಂಚ ರಿಲೀಫ್ ಸಿಗಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

