ಚಿತ್ರದುರ್ಗ: ಬಾಣಂತಿ ಸಾವು; ಐಸಿಯು ಎಂದು ಶವಗಾರಕ್ಕೆ ಶಿಫ್ಟ್ ಮಾಡಿದ ಆರೋಪ! ಜಿಲ್ಲಾಸ್ಪತ್ರೆಯಲ್ಲಿ ಉದ್ವಿಗ್ನ ಸ್ಥಿತಿ

ಚಿತ್ರದುರ್ಗ: ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ದಾಖಲಾಗಿದ್ದ ಬಾಣಂತಿಯೊಬ್ಬರು ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆ ಎದುರು ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೃತ ಮಹಿಳೆಯನ್ನು 28 ವರ್ಷದ ಶಿಲ್ಪಾ ಎಂದು ಗುರುತಿಸಲಾಗಿದೆ. ಶಿಲ್ಪಾ ಅವರು ಜಿಲ್ಲಾಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯ ನಂತರ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು.

“ಶಿಲ್ಪಾ ಅವರ ಸ್ಥಿತಿ ಗಂಭೀರವಾಗಿದೆ, ಹೆಚ್ಚಿನ ಚಿಕಿತ್ಸೆಗಾಗಿ ಐಸಿಯುಗೆ (ICU) ದಾಖಲಿಸುತ್ತೇವೆ ಎಂದು ವೈದ್ಯರು ನಮಗೆ ತಿಳಿಸಿದರು. ಆದರೆ, ನಮಗೆ ತಿಳಿಯದಂತೆ ಅವರನ್ನು ನೇರವಾಗಿ ಶವಗಾರಕ್ಕೆ (Morgue) ಶಿಫ್ಟ್ ಮಾಡಿದ್ದಾರೆ. ಅವರು ಬದುಕಿದ್ದಾಗಲೇ ಶವಗಾರಕ್ಕೆ ಸಾಗಿಸಿದ್ದಾರೆಯೇ ಎಂಬ ಅನುಮಾನ ನಮಗಿದೆ,” ಎಂದು ಕುಟುಂಬದ ಸದಸ್ಯರು ಕಣ್ಣೀರು ಹಾಕುತ್ತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಇದನ್ನೂ ಓದಿ: ಉಪ್ಪಿನಂಗಡಿ: ಕಾರು-ಬೈಕ್ ನಡುವೆ ಭೀಕರ ಡಿಕ್ಕಿ; ಸಹಕಾರಿ ಸಂಘದ ಹಿರಿಯ ಗುಮಾಸ್ತ ದುರ್ಮರಣ

ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡಿದ್ದರೆ ಶಿಲ್ಪಾ ಬದುಕುತ್ತಿದ್ದರು. ವೈದ್ಯರ ಮತ್ತು ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದಲೇ ಈ ಸಾವು ಸಂಭವಿಸಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.ಘಟನೆಯ ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆ ಆವರಣದಲ್ಲಿ ಶಿಲ್ಪಾ ಅವರ ಸಂಬಂಧಿಕರು ಮತ್ತು ಸಾರ್ವಜನಿಕರು ಜಮಾಯಿಸಿದ್ದು, ಸಂಬಂಧಪಟ್ಟ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪಟ್ಟು ಹಿಡಿದಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು