ಬೈಕ್ ಅಪಘಾತದಲ್ಲಿ ಗಾಯಗೊಂಡ ಶಶಿಕುಮಾರ್‌ಗೆ ನೆರವಾದ ಅರುಣ ಸಾರಥಿ ಸಂಘಟನೆ

puttur-aruna-sarathi-financial-help-shashikumar-bike-accident-kannada

ಪುತ್ತೂರು: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಸಾಮೆತಡ್ಕ ನಿವಾಸಿ ಶಶಿಕುಮಾರ್ ಅವರಿಗೆ ಅರುಣ ಸಾರಥಿ” ಚಾಲಕರ ಸಂಘಟನೆಯ ವತಿಯಿಂದ 10,000 ಧನಸಹಾಯ ನೀಡಲಾಯಿತು. ಧನಸಹಾಯವನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಅವರ ಉಪಸ್ಥಿತಿಯಲ್ಲಿ ಹಸ್ತಾಂತರಿಸಲಾಯಿತು.

ಸಂಘಟನೆಯು ಸಮಾಜದಲ್ಲಿರುವ ಅಶಕ್ತರು ಹಾಗೂ ಸಂಕಷ್ಟದಲ್ಲಿರುವವರಿಗೆ ನೆರವಾಗುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದ್ದು, ಈವರೆಗೆ ಒಟ್ಟು 1,70,000 ಧನಸಹಾಯವನ್ನು ವಿವಿಧ ಅಗತ್ಯವಿರುವವರಿಗೆ ನೀಡಲಾಗಿದೆ.

Advertisement

ಇದನ್ನೂ ಓದಿ: ಪಾರ್ಶ್ವವಾಯು ಪೀಡಿತ ಜಿನ್ನಪ್ಪ ನಾಯ್ಕರಿಗೆ ಅರುಣ ಸಾರಥಿ ಚಾಲಕರ ಸಂಘಟನೆಯಿಂದ ನೆರವು

ಸಂದರ್ಭದಲ್ಲಿ ಸಂಘಟನೆಯ ಸದಸ್ಯರಾದ ಸಂದೇಶ್ ನಾಯ್ಕ ಕೆಯ್ಯೂರು, ಸ್ವಸ್ತಿಕ್ ತಾರಿಗುಡ್ಡೆ, ಜಯಂತ ಆರ್ಲಪದವು, ಯೋಗೀಶ್ ಸಂಪ್ಯ ಹಾಗೂ ಟ್ರಸ್ಟ್‌ನ ಉಪಾಧ್ಯಕ್ಷ ರವಿ ಕುಮಾರ್ ರೈ ಕೆದಂಬಾಡಿ ಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು