ದೆಹಲಿ ವಿಧಾನಸಭೆ ಭದ್ರತಾ ಉಲ್ಲಂಘನೆ ಪ್ರಕರಣ: SUV ಚಾಲಕನಿಗೆ 8 ದಿನ ಪೊಲೀಸ್ ಕಸ್ಟಡಿ

ನವದೆಹಲಿ : ವಿಧಾನಸಭೆಯ ಭದ್ರತೆಯನ್ನು ಉಲ್ಲಂಘಿಸಿ SUV ವಾಹನದ ಮೂಲಕ ಒಳನುಗ್ಗಿದ ಆರೋಪಿಯನ್ನು ಮಂಗಳವಾರ ನ್ಯಾಯಾಲಯವು 8 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲು 10 ದಿನಗಳ ಕಸ್ಟಡಿಯನ್ನು ಕೋರಿದ್ದರು. ಆದರೆ ನ್ಯಾಯಾಲಯವು 8 ದಿನಗಳ ಪೊಲೀಸ್ ಕಸ್ಟಡಿಯನ್ನು ಮಂಜೂರು ಮಾಡಿತು.

Advertisement

ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಸರಬ್ಜೀತ್ ಸಿಂಗ್ ವಿಧಾನಸಭೆ ಆವರಣಕ್ಕೆ ಬಲವಂತವಾಗಿ ಪ್ರವೇಶಿಸಿ ಭದ್ರತಾ ವ್ಯವಸ್ಥೆಯಲ್ಲಿ ಗಂಭೀರ ಲೋಪವನ್ನು ಉಂಟುಮಾಡಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ದೊಡ್ಡ ಸಂಚು ಅಥವಾ “ಭಯೋತ್ಪಾದಕ ಅಂಶ” ಇರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ IPL: ಮುಂಬೈ ವಿರುದ್ಧ ಜೈಸ್ವಾಲ್ ಮಿಂಚಿನಾಟ; ರಾಜಸ್ಥಾನಕ್ಕೆ ರಾಯಲ್ ಗೆಲುವು

Advertisement

ವಿಚಾರಣೆ ವೇಳೆ, ಆರೋಪಿಯ ಮೊಬೈಲ್ ಫೋನ್ ಇನ್ನೂ ಪತ್ತೆಯಾಗಿಲ್ಲವೆಂದು ತಿಳಿದುಬಂದಿದೆ. ಇನ್ನೊಂದೆಡೆ, ಆರೋಪಿಯ ಪರ ವಕೀಲರು ಆತ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ ಎಂದು ವಾದಿಸಿದ್ದಾರೆ.

ಪೊಲೀಸರು ತಿಳಿಸಿದಂತೆ, ಆರೋಪಿ ವಿಧಾನಸಭೆ ಗೇಟ್‌ನ್ನು ಭೇದಿಸಿ ಒಳನುಗ್ಗುವಾಗ ಭದ್ರತಾ ಸಿಬ್ಬಂದಿಯ ಮೇಲೆ ವಾಹನ ಹಾಯಿಸಲು ಪ್ರಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇದರ ಹಿನ್ನೆಲೆಯಲ್ಲಿ ಹತ್ಯೆ ಯತ್ನ ಸೇರಿದಂತೆ ಹಲವು ಗಂಭೀರ ವಿಧಿಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement

ಘಟನೆಯ ನಂತರ ದೆಹಲಿ ನಗರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ತಿಳಿಯಲು ತನಿಖೆ ಮುಂದುವರಿದಿದೆ

ದೇಶದ ಮತ್ತಷ್ಟು ಸುದ್ದಿಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು