Breaking News

ಭಾರತಕ್ಕೆ ಕ್ರಿಕೆಟ್ ತಂಡವನ್ನು ನಿರಾಕರಿಸಿದ್ದ ಬಾಂಗ್ಲಾ, ಶೂಟಿಂಗ್ ತಂಡಕ್ಕೆ ಅನುಮತಿ

ನವದೆಹಲಿ: 2026ರ ಟಿ20 ವಿಶ್ವಕಪ್‌ಗೆ ಭಾರತಕ್ಕೆ ಕ್ರಿಕೆಟ್ ತಂಡ ಕಳುಹಿಸಲು ನಿರಾಕರಿಸಿದ್ದ ಬಾಂಗ್ಲಾದೇಶ, ಇದೀಗ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ಗಾಗಿ ತಮ್ಮ ಶೂಟಿಂಗ್ ತಂಡವನ್ನು ಭಾರತಕ್ಕೆ ಕಳುಹಿಸಲು ಅನುಮೋದಿಸಿದೆ. ಇಂಡೋರ್‌ನಲ್ಲಿ ಭದ್ರತಾ ಅಪಾಯ ಕಡಿಮೆ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇತ್ತೀಚೆಗೆ, 2026 ರ ಟಿ20 ವಿಶ್ವಕಪ್‌ಗೆ ಸಂಬಂಧಿಸಿದಂತೆ ಭಾರತ ಮತ್ತು ಬಾಂಗ್ಲಾದೇಶ ನಡುವೆ ದೊಡ್ಡ ವಿವಾದ ಭುಗಿಲೆದ್ದಿತು. ವೇಗಿ ಮುಸ್ತಫಿಜುರ್ ರೆಹಮಾನ್ ಅವರನ್ನು ಐಪಿಎಲ್​ನಿಂದ ಹೊರಹಾಕಿದ್ದಕ್ಕೆ ಕೆರಳಿದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡವನ್ನು ಭಾರತಕ್ಕೆ ಕಳುಹಿಸಲು ನಿರಾಕರಿಸಿತು. ಭದ್ರತಾ ಕಾಳಜಿಯನ್ನು ಉಲ್ಲೇಖಿಸಿ, ಬಾಂಗ್ಲಾದೇಶ ಸರ್ಕಾರವು ತನ್ನ ತಂಡದ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕೆಂದು ವಿನಂತಿಸಿತ್ತು, ಆದರೆ ಐಸಿಸಿ ಆ ವಿನಂತಿಯನ್ನು ತಿರಸ್ಕರಿಸಿತು.

Advertisement

ಇದನ್ನೂ ಓದಿ: ರಾಜ್ಯಪಾಲರ ಫೋನ್ ಕದ್ದಾಲಿಸಲಿಲ್ಲ: ಜಿ ಪರಮೇಶ್ವರ್

ಇದರಿಂದ ಮತ್ತಷ್ಟು ಕೆರಳಿದ್ದ ಬಾಂಗ್ಲಾ ಸರ್ಕಾರ ತನ್ನ ತಂಡವನ್ನು ಭಾರತಕ್ಕೆ ಕಳುಹಿಸಲು ಒಪ್ಪದೆ ಟೂರ್ನಿಯಿಂದ ಹಿಂದೆ ಸರಿಯಿತು. ಆದರೆ ಅದೇ ಬಾಂಗ್ಲಾದೇಶ ಸರ್ಕಾರ ಇದೀಗ ತನ್ನ ತಂಡವನ್ನು ಭಾರತಕ್ಕೆ ಕಳುಹಿಸಲು ಅನುಮತಿ ನೀಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

ವಾಸ್ತವವಾಗಿ ಫೆಬ್ರವರಿ 2 ರಿಂದ 14 ರವರೆಗೆ ನಡೆಯಲಿರುವ ಏಷ್ಯನ್ ರೈಫಲ್ ಮತ್ತು ಪಿಸ್ತೂಲ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲು ಬಾಂಗ್ಲಾದೇಶ ಸರ್ಕಾರ ತನ್ನ ರಾಷ್ಟ್ರೀಯ ಶೂಟಿಂಗ್ ತಂಡದ ಭಾರತ ಪ್ರವಾಸಕ್ಕೆ ಅನುಮೋದನೆ ನೀಡಿದೆ. ಯುವಜನ ಮತ್ತು ಕ್ರೀಡಾ ಸಚಿವಾಲಯವು ಬುಧವಾರ ಅಧಿಕೃತ ಸರ್ಕಾರಿ ಆದೇಶ ಹೊರಡಿಸಿ, ತಂಡಕ್ಕೆ ಭಾಗವಹಿಸಲು ಅನುಮತಿ ನೀಡಿದೆ.

ಶೂಟಿಂಗ್ ಚಾಂಪಿಯನ್‌ಶಿಪ್ ಸುರಕ್ಷಿತ ಸ್ಥಳವಾದ ಇಂದೋರ್‌ನಲ್ಲಿ ನಡೆಯುವುದರಿಂದ, ಶೂಟಿಂಗ್ ಚಾಂಪಿಯನ್‌ಶಿಪ್‌ಗೆ ಭದ್ರತಾ ಅಪಾಯ ಕಡಿಮೆ ಇರುವುದರಿಂದ ತನ್ನ ತಂಡವನ್ನು ಭಾರತಕ್ಕೆ ಕಳುಹಿಸುತ್ತಿರುವುದಾಗಿ ಬಾಂಗ್ಲಾದೇಶ ಸರ್ಕಾರ ಹೇಳಿದೆ.

ಈ ಬಗ್ಗೆ ಮಾತನಾಡಿದ ಯುವಜನ ಮತ್ತು ಕ್ರೀಡಾ ಕಾರ್ಯದರ್ಶಿ ಮುಹಮ್ಮದ್ ಮಹಬೂಬ್-ಉಲ್-ಆಲಂ, ‘ಶೂಟಿಂಗ್ ತಂಡದ ಭಾರತ ಪ್ರವಾಸವನ್ನು ಅನುಮೋದಿಸುವ ಮೊದಲು ಎಲ್ಲಾ ಅಂಶಗಳನ್ನು ಪರಿಗಣಿಸಲಾಗಿದೆ. ಬಾಂಗ್ಲಾದೇಶ ಶೂಟಿಂಗ್ ತಂಡದಲ್ಲಿ ಏಕೈಕ ಶೂಟರ್ ಮತ್ತು ಏಕೈಕ ತರಬೇತುದಾರರಿದ್ದಾರೆ. ಹೀಗಾಗಿ ಇವರಿಬ್ಬರಿಗೆ ಭದ್ರತೆ ಒದಗಿಸಲು ಸಮಸ್ಯೆ ಇಲ್ಲ. ಇದಲ್ಲದೆ, ಯಾವುದೇ ಭದ್ರತಾ ಸಮಸ್ಯೆಗಳಿಲ್ಲ ಎಂದು ಸಂಘಟಕರು ನಮಗೆ ಭರವಸೆ ನೀಡಿದ್ದಾರೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿದ ನಂತರ, ಸರ್ಕಾರವು ಶೂಟಿಂಗ್ ತಂಡದ ಪ್ರಯಾಣವನ್ನು ಅನುಮೋದಿಸಿದೆ’ ಎಂದಿದ್ದಾರೆ.

ಫೆಬ್ರವರಿ 5 ರಂದು ನಡೆಯಲಿರುವ ಪಂದ್ಯಾವಳಿಯಲ್ಲಿ ಬಾಂಗ್ಲಾದೇಶವನ್ನು ಪ್ರಮುಖ ಶೂಟರ್ ರಬಿಯುಲ್ ಇಸ್ಲಾಂ ಪ್ರತಿನಿಧಿಸಲಿದ್ದಾರೆ. ಅವರೊಂದಿಗೆ ರಾಷ್ಟ್ರೀಯ ಕೋಚ್ ಶರ್ಮಿನ್ ಅಖ್ತರ್ ಕೂಡ ಇರುತ್ತಾರೆ. ಬಾಂಗ್ಲಾದೇಶ ನೌಕಾಪಡೆಯ ಕ್ರೀಡಾಪಟು ರಬಿಯುಲ್ ವಿಶೇಷ ಪಾಸ್‌ಪೋರ್ಟ್ ಹೊಂದಿದ್ದು, ಅದು ಅವರಿಗೆ ಏಳು ದಿನಗಳ ಕಾಲ ವೀಸಾ ಇಲ್ಲದೆ ಭಾರತದಲ್ಲಿ ಉಳಿಯಲು ಅನುವು ಮಾಡಿಕೊಡುತ್ತದೆ. ಆದಾಗ್ಯೂ, ಕೋಚ್ ಶರ್ಮಿನ್ ಭಾರತೀಯ ವೀಸಾ ಪಡೆಯಬೇಕಾಗುತ್ತದೆ. ಇವರಿಬ್ಬರು ಜನವರಿ 31 ರಂದು ನವದೆಹಲಿಗೆ ಬಂದಿಳಿಯಲಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು