ಬಂಟ್ವಾಳ: ಇಡೀ ಜಿಲ್ಲೆಯನ್ನೇ ತಲ್ಲಣಗೊಳಿಸಿದ್ದ ಬಿ.ಸಿ. ರೋಡ್ ಬಸ್ ನಿಲ್ದಾಣದ ಯುವತಿ ಲಾವಣ್ಯ ಬರ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಬಿ.ಸಿ. ರೋಡ್ನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರನ್ನು ಮಚ್ಚಿನಿಂದ ಕೊಚ್ಚಿ ಅಮಾನುಷವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಲ್ ನಿವಾಸಿ ಚೇತನ್ನನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಘಟನೆ ನಡೆದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಾಗಿ ಪೊಲೀಸರು ವ್ಯಾಪಕ ಶೋಧ ಕಾರ್ಯ ಕೈಗೊಂಡಿದ್ದರು. ಆರೋಪಿಯ ಪತ್ತೆಗಾಗಿ ಪೊಲೀಸರು ತಕ್ಷಣವೇ ವಿಶೇಷ ತನಿಖಾ ತಂಡಗಳನ್ನು ರಚಿಸಿದ್ದರು.
ಈ ವಿಶೇಷ ತಂಡಗಳು ಅತ್ಯಂತ ಚುರುಕಿನ ಹಾಗೂ ತ್ವರಿತ ಕಾರ್ಯಾಚರಣೆಯನ್ನು ನಡೆಸಿ, ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ ಆರೋಪಿ ಚೇತನ್ನನ್ನು ಯಶಸ್ವಿಯಾಗಿ ತಮ್ಮ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿಯ ಬಂಧನಕ್ಕೆ ಸಂಬಂಧಿಸಿದಂತೆ ಇನ್ನು ಕೆಲವು ಪ್ರಮುಖ ವಿವರಗಳು ಹೊರಬರಬೇಕಿದೆ.
ಇದನ್ನೂ ಓದಿ: ಬಿ.ಸಿ. ರೋಡ್ನಲ್ಲಿ ಸಾರ್ವಜನಿಕರ ಕಣ್ಣೆದುರೇ ಯುವತಿಯನ್ನು ಕತ್ತಿಯಿಂದ ಕೊಚ್ಚಿ ಭೀಕರ ಕೊಲೆ; ಕಕ್ಕೆಪದವು ನಿವಾಸಿ ಲಾವಣ್ಯ ಬಲಿ
ಪೊಲೀಸರು ಆರೋಪಿಯನ್ನು ನಿಖರವಾಗಿ ಯಾವ ಸ್ಥಳದಲ್ಲಿ ಸುತ್ತುವರಿದು ವಶಕ್ಕೆ ಪಡೆದರು ಮತ್ತು ಈ ಕಾರ್ಯಾಚರಣೆಯ ಹಿಂದಿನ ಸಂಪೂರ್ಣ ವಿವರಗಳನ್ನು ಇನ್ನಷ್ಟೇ ಅಧಿಕೃತವಾಗಿ ಪ್ರಕಟಿಸಬೇಕಾಗಿದೆ. ಈ ಕೊಲೆಗೆ ನಿಖರವಾದ ಕಾರಣವೇನೆಂಬುದನ್ನು ಪತ್ತೆಹಚ್ಚಲು ಪೊಲೀಸರು ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸುತ್ತಿದ್ದು, ಹೆಚ್ಚಿನ ಮಾಹಿತಿ ಲಭ್ಯವಾದ ತಕ್ಷಣವೇ ಸಮಗ್ರ ವಿವರಗಳನ್ನು ಬಿಡುಗಡೆ ಮಾಡಲಾಗುವುದು.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

