Breaking News

Bidar: ಕುತ್ತಿಗೆ ಕೊಯ್ದ ಗಾಳಿಪಟ ದಾರ: ಮಗಳಿಗೆ ಕೊನೆ ಕರೆ ಮಾಡಿ ಪ್ರಾಣ ಬಿಟ್ಟ ತಂದೆ

ಬೀದ‌ರ್: ಗಾಳಿ ಪಟ ಹಾರಿಸುವ ಮಾಂಜಾ ದಾರಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಕುತ್ತಿಗೆಗೆ ಮಾಂಜಾ ದಾರ ಸಿಲುಕಿ ಅತನ ಕತ್ತು ಸೀಳಿದ ಘಟನೆ ಬೀದರ್ ನಲ್ಲಿ ವರದಿಯಾಗಿದೆ.

ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ಈ ದುರ್ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ಚಿಟಗುಪ್ಪ ತಾಲೂಕಿನ ಬಂಬುಳಗಿ ಗ್ರಾಮದ ಸಜೀವ್ ಕುಮಾರ್ ಹೊಸಮನಿ (48 ವರ್ಷ) ಎಂದು ಗುರುತಿಸಲಾಗಿದೆ. ಸಂಜಕುಮಾರ ಗುಂಡಪ್ಪಗೆ ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರಿದ್ದರು ಎಂದು ತಿಳಿದುಬಂದಿದೆ.

Advertisement

ಇನ್ನು ಪೊಲೀಸ್ ಮೂಲಗಳ ಪ್ರಕಾರ ಹುಮನಾಬಾದ್ ಪಟ್ಟಣದ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಗಳನ್ನು ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರೆಯಲು ಸಜೀವ್‌ ಕುಮಾ‌ರ್ ಹೊಸಮನಿ ಬೈಕ್ ಮೇಲೆ ತೆರಳುತ್ತಿದ್ದರು. ಈ ವೇಳೆ ಮಾಂಜಾ ದಾರ ಕುತ್ತಿಗೆಗೆ ತಗುಲಿ ಕುತ್ತಿಗೆ ಕೊಯ್ದುಕೊಂಡಿದೆ. ಬಳಿಕ ಬೈಕ್‌ ಮೇಲಿಂದ ಕೆಳಗೆ ಬಿದ್ದು ಕೆಲಹೊತ್ತು ರಕ್ತದ ಮಡವಿನಲ್ಲಿ ಒದ್ದಾಡಿ ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಮಗಳಿಗೆ ಕರೆ ಮಾಡಿ ಪ್ರಾಣಬಿಟ್ಟ ಹೊಸಮನಿ

ಮಾಂಜಾದಾರ ಕುತ್ತಿಗೆ ಸೀಳುತ್ತಲೇ ಬೈಕ್ ನಿಂದ ಕೆಳಗೆ ಬಿದ್ದ ಸಜೀವ್‌ ಕುಮಾರ್ ಹೊಸಮನಿ ತೀವ್ರ ರಕ್ತದ ಮುಡುವಿನಲ್ಲಿ ಒದ್ದಾಡುತ್ತಿದ್ದರು. ಈ ವೇಳೆ ಕುತ್ತಿಗೆಗೆ ಬಟ್ಟೆ ಸುತ್ತಿಕೊಂಡು ಮೊಬೈಲ್ ತೆಗೆದುಕೊಂಡು ತಮ್ಮ ಮಗಳಿಗೆ ಕರೆ ಮಾಡಿದ್ದಾರೆ. ಬಳಿಕ ಸ್ಥಳೀಯರು ನೋಡಿ ಗಾಯದ ಮೇಲೆ ಬಟ್ಟೆಯನ್ನು ಇಟ್ಟು ರಕ್ತಸ್ರಾವ ನಿಲ್ಲಿಸಲು ಪ್ರಯತ್ನಿಸಿದರು. ಆದರೆ ಸ್ವಲ್ಪ ಸಮಯದ ನಂತರ ಅವರು ಕೊನೆಯುಸಿರೆಳೆದರು ಎನ್ನಲಾಗಿದೆ.

ಸೂಕ್ತ ಸಮಯಕ್ಕೆ ಬಾರದ ಆ್ಯಂಬುಲೆನ್ಸ್

ಇನ್ನು ಸ್ಥಳೀಯ ನಿವಾಸಿಗಳ ಪ್ರಕಾರ, ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿತ್ತು, ಆದರೆ ಅದು ಬರುವ ಹೊತ್ತಿಗೆ ಹೊಸಮನಿ ಕೊನೆಯುಸಿರೆಳೆದಿದ್ದರು. ಆ್ಯಂಬುಲೆನ್ಸ್ ಸೂಕ್ತ ಸಮಯಕ್ಕೆ ಬಂದಿದ್ದರೆ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಬದುಕಿಸಬಹುದಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಅಧಿಕಾರಿಗಳ ವಿರುದ್ಧ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಆಂಬ್ಯುಲೆನ್ಸ್‌ ಸಮಯಕ್ಕೆ ಸರಿಯಾಗಿ ಬಂದಿದ್ದರೆ ಹೊಸಮನಿ ಬದುಕುಳಿಯುತ್ತಿದ್ದರು. ಆ್ಯಂಬಲೆನ್ಸ್ ವಿಳಂಬದಿಂದಾಗಿಯೇ ಅವರು ಸಾವನ್ನಪ್ಪಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಇದನ್ನೂ ಓದಿ: Bangalore: ‘ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ’, ಡಿ.ಕೆ.ಶಿ ಪೋಸ್ಟ್

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು