Breaking News

ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರ ಅಂಕಿತ!: ಸಚಿವ ಸಂಪುಟ ಅಧಿಕೃತವಾಗಿ ವಿಸರ್ಜನೆ; ಹೊಸ ಸಿಎಂ ಬರೋವರೆಗೂ ಸಿದ್ದರಾಮಯ್ಯ ಅವರೇ ಬಾಸ್!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಈಗ ಅಧಿಕೃತವಾಗಿ ಅಂತಿಮ ಘಟ್ಟ ತಲುಪಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ನಿನ್ನೆ (ಮೇ 28) ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದ ಸಿದ್ದರಾಮಯ್ಯ ಅವರ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು (ಮೇ 29) ಅಧಿಕೃತವಾಗಿ ಅಂಗೀಕರಿಸಿದ್ದಾರೆ.  ಮೇ 28ರ ಗುರುವಾರ ಬೆಳಗ್ಗೆ ತಮ್ಮ ಕಾವೇರಿ ನಿವಾಸದಲ್ಲಿ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಮಹತ್ವದ ಉಪಹಾರ ಕೂಟ

Read More

‘ಮಾತಾಡಿದ್ರೆ ಮುತ್ತು ಒಡೆದು ಹೋಗತ್ತೆ, ಸದ್ಯದಲ್ಲೇ ಡಿಕೆ ಶಿವಕುಮಾರ್​​ಗೆ ಸಾಡೇ ಸಾತಿ ಶನಿ ಕಾಟ!’

ತುಮಕೂರು: “ಮಾತು ಆಡಿದರೆ ಮುತ್ತು ಒಡೆದು ಹೋದಂತೆ! ಸದ್ಯಕ್ಕೆ ಯಾವುದೇ ಆತುರದ ಹೇಳಿಕೆ ನೀಡಬೇಡಿ, ಇಲ್ಲದಿದ್ದರೆ ಕೈಗೆ ಬಂದ ತುತ್ತು ಬಾಯಿಗೆ ಬರದೇ ಹೋಗಬಹುದು!” – ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (D.K. Shivakumar) ಅವರಿಗೆ ಅವರ ಪರಮ ದೈವ, ತುಮಕೂರಿನ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ (Nonavinakere Kadasiddeshwara Mutt) ಕರಿಬಸವೇಶ್ವರ ಸ್ವಾಮೀಜಿ (ಅಜ್ಜಯ್ಯ) ಇಂತಹದೊಂದು ಅತ್ಯಂತ ಗಂಭೀರ ಹಾಗೂ ನಿಗೂಢ ಎಚ್ಚರಿಕೆಯನ್ನು ನೀಡಿದ್ದಾರೆ. ಸಿದ್ದರಾಮಯ್ಯ

Read More

‘ನನ್ನ ರಾಜಕೀಯ ಜೀವನ ತೆರೆದ ಪುಸ್ತಕ, ಸಂವಿಧಾನವೇ ನನ್ನ ಧರ್ಮ!’: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಸುದ್ದಿಗೋಷ್ಠಿ

ಬೆಂಗಳೂರು: “ನಾನು ಯಾವತ್ತೂ ಅಧಿಕಾರ, ಹಣದ ಹಿಂದೆ ಹೋದವನಲ್ಲ. ಆಸ್ತಿ-ಪಾಸ್ತಿ ಮಾಡಿಕೊಳ್ಳಬೇಕೆಂಬ ಯೋಚನೆಯನ್ನೂ ಮಾಡಿದವನಲ್ಲ. ನನ್ನ ರಾಜಕೀಯ ಜೀವನ ಒಂದು ತೆರೆದ ಪುಸ್ತಕ,”- ಹೀಗೆಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಸಿದ್ದರಾಮಯ್ಯ ಅವರು ಅತ್ಯಂತ ಭಾವುಕರಾದರು. ಹೈಕಮಾಂಡ್ ಸೂಚನೆಯ ಬೆನ್ನಲ್ಲೇ ರಾಜೀನಾಮೆ ಪತ್ರ ಸಲ್ಲಿಸಿ ಗೃಹಕಚೇರಿ ‘ಕೃಷ್ಣಾ’ದಲ್ಲಿ ಹಮ್ಮಿಕೊಂಡಿದ್ದ ಕಡೆಯ ಸುದ್ದಿಗೋಷ್ಠಿಯಲ್ಲಿ ಅವರು ತಮ್ಮ ಸುದೀರ್ಘ 50 ವರ್ಷಗಳ ರಾಜಕೀಯ ಪಯಣವನ್ನು ನೆನೆದು ಕಣ್ಣಾಲಿಗಳನ್ನು ತುಂಬಿಕೊಂಡರು. ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ವಿಚಾರವನ್ನು ಅಧಿಕೃತಪಡಿಸಿದ

Read More