ದಕ್ಷಿಣ ಕನ್ನಡ
ಮುಂಗಾರು ಪ್ರವೇಶ ದಿನಾಂಕ ಬದಲಾವಣೆ: ಜೂನ್ 4ಕ್ಕೆ ಕೇರಳ ಕರಾವಳಿಗೆ ಮಾನ್ಸೂನ್ ಎಂಟ್ರಿ; ಹವಾಮಾನ ಇಲಾಖೆ ಅಲರ್ಟ್!
ಕೇರಳಕ್ಕೆ ಜೂನ್ 4ರಂದು ಮುಂಗಾರು ಪ್ರವೇಶ ಪಡೆಯುತ್ತಿದ್ದಂತೆಯೇ, ಮುಂದಿನ ಕೆಲವು ದಿನಗಳಲ್ಲಿ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಿಗೂ ಮುಂಗಾರು ವಿಸ್ತರಿಸುವ ಸಾಧ್ಯತೆ ಇದೆ.
Read Moreಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ – ಬಂಟ್ವಾಳ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ
ಬಂಟ್ವಾಳ ತಾಲೂಕಿನ ಮಂಚಿ ಕೊಳ್ನಾಡು ಶಾಲೆಯಲ್ಲಿ ಜೂನ್ 1 ರಂದು ಶಾಲಾ ಪ್ರಾರಂಭೋತ್ಸವ ನಡೆದಿದ್ದು, ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಕ್ರೀಡಾ ಜರ್ಸಿ ವಿತರಿಸಲಾಯಿತು.
Read Moreಜೂನ್ 3 ರಿಂದ ಬೆಂಗಳೂರು-ಮಂಗಳೂರು ‘ವಂದೇ ಭಾರತ್’ ಪ್ರಾಯೋಗಿಕ ಸಂಚಾರ ಆರಂಭ; ಕೇಂದ್ರ ಸಚಿವ ವಿ. ಸೋಮಣ್ಣ ಘೋಷಣೆ!
ಚಿಕ್ಕಮಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಕರಾವಳಿಯ ಮಂಗಳೂರಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಜೂನ್ 3 ರಿಂದಲೇ ಬೆಂಗಳೂರು ಮತ್ತು ಮಂಗಳೂರು ನಡುವೆ ಬಹುನಿರೀಕ್ಷಿತ ‘ವಂದೇ ಭಾರತ್’ (Vande Bharat) ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ (Trial Run) ಆರಂಭವಾಗಲಿದೆ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಕೇಂದ್ರ ಸಚಿವ ವಿ. ಸೋಮಣ್ಣ ಪ್ರಕಟಿಸಿದ್ದಾರೆ. ಚಿಕ್ಕಮಗಳೂರಿನ ಅಜ್ಜಂಪುರದಲ್ಲಿ ಭಾನುವಾರ ನಡೆದ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಈ
Read Moreಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ಶಿಕ್ಷಕರ ಪುನಶ್ಚೇತನ ಕಾರ್ಯಕ್ರಮ!: ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರ ಕೊಡುಗೆ ಅಗತ್ಯ ಎಂದ ಪ್ರೀತಿ ಶೆಣೈ
ಪುತ್ತೂರು: ವಿವಿಧ ಭಾಷೆ, ಸಂಸ್ಕೃತಿ, ಸಾಮಾಜಿಕ ಹಿನ್ನೆಲೆ ಹಾಗೂ ಜೀವನಾನುಭವಗಳನ್ನು ಹೊಂದಿರುವ ವಿದ್ಯಾರ್ಥಿಗಳನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವುದು ಪ್ರತಿಯೊಬ್ಬ ಶಿಕ್ಷಕರ ಪ್ರಮುಖ ಕರ್ತವ್ಯವಾಗಿದೆ. ಶಾಲಾ ಹಂತದಲ್ಲೇ ಪರಸ್ಪರ ಗೌರವ, ಸಹಿಷ್ಣುತೆ ಹಾಗೂ ಸಮಾವೇಶಾತ್ಮಕ ಶಿಕ್ಷಣದ ಮೌಲ್ಯಗಳನ್ನು ಬೆಳೆಸಿದಾಗ ಮಾತ್ರ ವಿದ್ಯಾರ್ಥಿಗಳು ಸರ್ವತೋಮುಖ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಸಂಪನ್ಮೂಲ ವ್ಯಕ್ತಿ ಪ್ರೀತಿ ಶೆಣೈ ಅಭಿಪ್ರಾಯಪಟ್ಟಿದ್ದಾರೆ. ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ‘ಶಿಕ್ಷಕರ ಪುನಶ್ಚೇತನ ಕಾರ್ಯಕ್ರಮ’ದಲ್ಲಿ ಅವರು
Read Moreಬಂಟ್ವಾಳ: ದೈವದ ತಂಬಿಲದ ನಡುವೆಯೇ ಮದ್ಯಪಾನ; ಪ್ರಶ್ನಿಸಿದ ದೊಡ್ಡಪ್ಪನಿಗೆ ಬೀರ್ ಬಾಟಲಿಯಿಂದ ಇರಿದು ಕೊಂದ ಪಾಪಿ ಮಗ!
ಬಂಟ್ವಾಳ: ದೈವದ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ಮನೆಯ ಹೊರಗಡೆ ಮದ್ಯಪಾನ ಮಾಡಿ ಗಲಾಟೆ ಮಾಡುವುದನ್ನು ಆಕ್ಷೇಪಿಸಿದ ಕಾರಣಕ್ಕೆ, 23 ವರ್ಷದ ಯುವಕನೊಬ್ಬ ತನ್ನ ಸ್ವಂತ ದೊಡ್ಡಪ್ಪನ ಕುತ್ತಿಗೆಗೆ ಬೀರ್ ಬಾಟಲಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಡಬೆಟ್ಟು ಎಂಬಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಕೊಲೆಯಾದ ದುರ್ದೈವಿಯನ್ನು ಕಡಬೆಟ್ಟು ನಿವಾಸಿ ಮಧುಸೂದನ್ ಎಂದು ಗುರುತಿಸಲಾಗಿದೆ. ಹತ್ಯೆ ಮಾಡಿದ ಆರೋಪಿಯನ್ನು ಮಧುಸೂದನ್ ಅವರ ತಮ್ಮ ಕೇಶವ ಪೂಜಾರಿ ಅವರ ಮಗ ರಾಹುಲ್ (23)
Read Moreಬಂಟ್ವಾಳ: ಭಾರಿ ಮಳೆಗೆ ಮೋಂತಿಮಾರು ದುರ್ಗಾಪರಮೇಶ್ವರಿ ದೇವಸ್ಥಾನದ ಮೇಲೆ ಬಿದ್ದ ತೆಂಗಿನ ಮರ, ಹಾನಿ
ಬಂಟ್ವಾಳ ತಾಲೂಕಿನ ಮೋಂತಿಮಾರಿನಲ್ಲಿ ಭಾರಿ ಗಾಳಿ-ಮಳೆಗೆ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದ ಶೀಟ್ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿದೆ. ಮಂಚಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.
Read Moreಸಂಸ್ಕಾರದ ಬೆಳಕನ್ನು ಅಂತರಂಗದಲ್ಲಿ ತುಂಬಿಕೊಳ್ಳಬೇಕು: ಡಾ.ರಾಹುಲ್ ದೇವರಾಜ್
ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ನಡೆದ ಪ್ರೇರಣಾದಾಯಿ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ. ರಾಹುಲ್ ದೇವರಾಜ್ ವಿದ್ಯಾರ್ಥಿಗಳಿಗೆ ಸಂಸ್ಕಾರ, ಕೌಶಲ್ಯ ಹಾಗೂ ರಾಷ್ಟ್ರಾಭಿಮಾನದ ಮಹತ್ವವನ್ನು ವಿವರಿಸಿದರು.
Read Moreದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್’ ಘೋಷಣೆ!: 31 ರಂದು ಸಿಡಿಲು ಸಹಿತ ಭಾರೀ ಮಳೆ ಮುನ್ನೆಚ್ಚರಿಕೆ!
ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಏಕಾಏಕಿ ಪ್ರಮುಖ ಬದಲಾವಣೆಯಾಗಿದ್ದು, ಇಂದಿನಿಂದ (ಮೇ 30) ಎರಡು ದಿನಗಳ ಕಾಲ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ವೀಕೆಂಡ್ ಆರಂಭದ ಹೊತ್ತಿನಲ್ಲೇ ವರುಣನ ಆರ್ಭಟ ತೀವ್ರಗೊಳ್ಳುವ ಲಕ್ಷಣಗಳು ಕಾಣಿಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮೇ 30 ಮತ್ತು ಮೇ 31 ರಂದು ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ. ಹವಾಮಾನ ಇಲಾಖೆಯ ಅಧಿಕೃತ ಪ್ರಕಟಣೆಯ ಪ್ರಕಾರ, ದಕ್ಷಿಣ
Read Moreಧರ್ಮಸ್ಥಳದಲ್ಲಿ ಭಕ್ತರಿಗೆ ಹಗಲು ದರೋಡೆ ಭೀತಿ!: ದೇವರ ಪ್ರಸಾದ ಎಂದು ಲಡ್ಡು-ಜ್ಯೂಸ್ ಕೊಟ್ಟು ವೃದ್ಧೆ ಜಿ.ಪಿ.ನಗರ ಪ್ರೇಮಾ ಅವರ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲೂಟಿ!
ಬೆಳ್ತಂಗಡಿ: ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಭಕ್ತರನ್ನು ಗುರಿಯಾಗಿಸಿಕೊಂಡು ಅಪರಿಚಿತ ದರೋಡೆಕೋರನೊಬ್ಬ ದೇವರ ಪ್ರಸಾದದ ಹೆಸರಿನಲ್ಲಿ ವಂಚಿಸಿ, ಕೋಟ್ಯಂತರ ಭಕ್ತರ ಆರಾಧ್ಯ ದೈವದ ಸನ್ನಿಧಿಯಲ್ಲೇ ವೃದ್ಧೆಯೊಬ್ಬರ ಚಿನ್ನಾಭರಣ ಹಾಗೂ ನಗದು ಲೂಟಿ ಮಾಡಿರುವ ಕಳವಳಕಾರಿ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮಹಾದ್ವಾರದ ಮುಂಭಾಗದಲ್ಲೇ ಈ ಹಗಲು ದರೋಡೆ ನಡೆದಿದೆ. ಬೆಂಗಳೂರಿನ ಜೆ.ಪಿ. ನಗರ ನಿವಾಸಿಯಾದ ಪ್ರೇಮ (70 ವರ್ಷ) ಎಂಬ ವೃದ್ಧೆ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮುಗಿಸಿ ಬೆಂಗಳೂರಿಗೆ ಮರಳಲು
Read Moreಸ್ಥಳ ಪರಿಶೀಲನೆ ನಡೆಸುತ್ತಿದ್ದ ಪೊಲೀಸರ ಮೇಲೆಯೇ ಹರಿದ ಕಾರು!; ಹೆಡ್ ಕಾನ್ಸ್ಟೇಬಲ್ ಸ್ಥಿತಿ ಗಂಭೀರ
ಮಂಗಳೂರು: ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳಿಗೆ ಅತಿ ವೇಗವಾಗಿ ಬಂದ ಕಾರೊಂದು ಭೀಕರವಾಗಿ ಡಿಕ್ಕಿ ಹೊಡೆದಿರುವ ಘಟನೆ ಮಂಗಳೂರು ನಗರದ ಬಳ್ಳಾಲ್ ಬಾಗ್ ಎಂಬಲ್ಲಿ ನಡೆದಿದೆ. ಕಾರು ಚಾಲಕನ ಬೇಜವಾಬ್ದಾರಿತನ ಹಾಗೂ ಅಜಾಗರೂಕತೆಯ ಚಾಲನೆಗೆ ಇಬ್ಬರು ಪೊಲೀಸ್ ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು, ಈ ಭೀಕರ ಅಪಘಾತದ ಲೈವ್ ದೃಶ್ಯಗಳು ಸ್ಥಳೀಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿವೆ. ಮಂಗಳೂರು ನಗರದ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ವಿಠ್ಠಲ ದಾಸ ಹಾಗೂ ಕಾನ್ಸ್ಟೇಬಲ್ ಕುಮಾರ ಅವರು
Read More
