ದಕ್ಷಿಣ ಕನ್ನಡ
ಮಕರ ಸಂಕ್ರಾಂತಿ: ಎಳ್ಳು-ಬೆಲ್ಲ ಹಂಚಿ ಸಂಭ್ರಮಿಸಿದ ಕಲ್ಲಡ್ಕ ಶ್ರೀರಾಮ ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳು
ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.15 ರಂದು ಮಕರ ಸಂಕ್ರಮಣ ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳು ಎಳ್ಳು-ಬೆಲ್ಲ ಹಂಚಿ ಸಂಭ್ರಮಿಸಿದರು.
Read Moreಪಜೀರು ಗೋವಣಿತಾಶ್ರಯ ಗೋಶಾಲೆಗೆ ಗೋರಕ್ಷಾ ನಿಧಿ ಸೇನೆಯಿಂದ ಧನ ಸಹಾಯ
ಜಿಲ್ಲೆಯಲ್ಲಿ ಅನೇಕ ಗೋಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಖಾಸಗಿ ಗೋಶಾಲೆಗಳೂ ಸೇರಿವೆ. ಗಂಡು ಕರುಗಳನ್ನು ಅಥವಾ ತಂದುಬಿಟ್ಟ ವಯಸ್ಸಾದ ದನಗಳು ಅಥವಾ ಕಸಾಯಿಖಾನೆಗೆ ಕೊಂಡೊಯ್ಯುವಾಗ ರಕ್ಷಣೆಗೊಳಪಟ್ಟ ದನಗಳನ್ನು ಇಂತಹ ಗೋಶಾಲೆಗಳಿಗೆ ಒಪ್ಪಿಸಲಾಗುತ್ತದೆ. ಇಲ್ಲಿ ಅವುಗಳ ಆರೈಕೆ ಮಾಡಲಾಗುತ್ತದೆ.
Read MoreScheme : ನ್ಯೂ ಇಂಡಿಯಾ ಲಕ್ಕಿ ಸ್ಕೀಂ ವಂಚನೆ: ಎಂಡಿ ಅಶ್ರಫ್ ವಿರುದ್ಧ ಕ್ರಮಕ್ಕೆ ಆಗ್ರಹ
ನ್ಯೂ ಇಂಡಿಯಾ ಸ್ಕೀಂ ಹೆಸರಿನಲ್ಲಿ ಸಾವಿರಾರು ಮಂದಿಗೆ ನೂರಾರು ಕೋಟಿ ವಂಚಿಸಿದ ಪ್ರಕರಣ ಸಂಬಂಧ ಹಣ ಕಳೆಂದುಕೊಂಡ ಸಂತ್ರಸ್ತರು ಇಂದು ಮಂಗಳೂರಿನ ಟವರ್ ಕ್ಲಾಕ್ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಜನರನ್ನು ವಂಚಿಸಿದ ನ್ಯೂ ಇಂಡಿಯಾ ಲಕ್ಕಿ ಸ್ಕೀಂನ ಎಂಡಿ ಅಶ್ರಫ್ ಮತ್ತು ಮ್ಯಾನೇಜರ್ ಹನೀಫ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ವಂಚನೆಗೊಳಗಾದ ಜನರಿಗೆ ನ್ಯಾಯ ಒದಗಿಸಿಕೊಡಬೇಕು ಹಾಗೂ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಲೇಡ್ ಕಂಪನಿಗಳಿಂದ ಜನರನ್ನು ರಕ್ಷಿಸುವಂತೆ ಒತ್ತಾಯಿಸಿ ಮಂಗಳೂರು ಲಕ್ಕಿ ಸ್ಕೀಂ ಸಂತ್ರಸ್ತರ ವೇದಿಕೆಯು ಪ್ರತಿಭಟನೆ ನಡೆಸಿತು.
Read MoreBeltangady : ಬಾಲಕನ ಸಾವಿನ ಸುತ್ತ ಅನುಮಾನದ ಹುತ್ತ; ಕೊಲೆ ಶಂಕೆ
ನಿನ್ನೆಯಷ್ಟೇ ದೇವಸ್ಥಾನಕ್ಕೆ ಹೋಗಲು ಬೆಳಗ್ಗೆ ಮನೆಯಿಂದ ಹೊರಟಿದ್ದ ಶಾಲಾ ವಿದ್ಯಾರ್ಥಿಯ ಶವ ಕೆರೆಯಲ್ಲಿ ಸಿಕ್ಕಿರುವುದು ವರದಿಯಾಗಿತ್ತು. ಆದರೆ ಇದೀಗ ಈ ಘಟನೆಯ ಹಿಂದೆ ಬೇರೆ ಏನೋ ಕೈವಾಡವಿದೆ ಎಂಬೋದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಇದು ಪೂರ್ವಯೋಜಿತ ಹಾಗೂ ಭೀಕರ ಹತ್ಯೆಯಾಗಿರಬಹುದೆಂದು ಸೂಚಿಸಿದೆ.
Read MoreKarkala : ಕುದುರೆಮುಖ ಸೇರಿ ಈ ವನ್ಯಜೀವಿ ವಲಯಗಳಲ್ಲಿ ಚಾರಣಕ್ಕೆ ನಿರ್ಬಂಧ
ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಸೋಮೇಶ್ವರ ವನ್ಯಜೀವಿ ಅಭಯಾರಣ್ಯ ಮತ್ತು ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯದೊಳಗಿನ ಚಾರಣಗಳಿಗೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ
Read MoreBantwal: ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಆಜೇರು, ಉಮೇಶ್ ಮಿಜಾರ್ಗೆ ಕಲಾಭೂಷಣ ಪ್ರಶಸ್ತಿ
ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಆಜೇರು, ಉಮೇಶ್ ಮಿಜಾರ್ಗೆ ಕಲಾಭೂಷಣ ಪ್ರಶಸ್ತಿ ರ ಸಮ್ಮಾನ್ ಪ್ರಶಸ್ತಿ ಒಲಿದುಬಂದಿದೆ.
Read MoreBangalore : ಬೆಂಗಳೂರು-ವನ್, ಕರ್ನಾಟಕ-ವನ್ ಕೇಂದ್ರಗಳಲ್ಲಿ KSRTC ಟಿಕೆಟ್ ಬುಕ್ಕಿಂಗ್ ಸೌಲಭ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಪ್ರಯಾಣಿಕರಿಗೆ ಮತ್ತೊಂದು ಅನುಕೂಲ ಕಲ್ಪಿಸುವ ಉದ್ದೇಶದಿಂದ ಮುಂಗಡ ಟಿಕೆಟ್ ಕಾಯ್ದಿರಿಸುವ ಸೌಲಭ್ಯವನ್ನು ಬೆಂಗಳೂರು-ಒನ್ ಹಾಗೂ ಕರ್ನಾಟಕ-ಒನ್ ಕೇಂದ್ರಗಳಿಗೆ ವಿಸ್ತರಿಸಿದೆ.
Read MoreBelthangady : ಧನುಪೂಜೆಗೆಂದು ತೆರಳಿದ ಬಾಲಕ ಕೆರೆಯಲ್ಲಿ ಶವವಾಗಿ ಪತ್ತೆ
ಇಂದು ಬೆಳಗ್ಗೆ ಧನುಪೂಜೆಗೆಂದು ತೆರಳಿದ ಬಾಲಕ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕ ಸುಬ್ರಹ್ಮಣ್ಯ ನಾಯಕ್ ಪುತ್ರ ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಸುಮಂತ್ ಪ್ರತಿದಿನ ಸ್ನೇಹಿತರ ಜತೆ ಧನು ಪೂಜೆಗೆ ತೆರಳುತ್ತಿದ್ದ, ಇಂದು ಬೆಳಗ್ಗೆ ಪೂಜೆಗೆ ತೆರಳಿದ ಬಾಲಕ ಬಾರದಧ ಇರುವ ಕುರಿತು ಸ್ನೇಹಿತರಿಂದ ಮಾಹಿತಿ ಬಂದಾಗ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
Read MoreDakshina Kannada : ದ.ಕ., ಉಡುಪಿ ಸೇರಿ ರಾಜ್ಯದ 11 ಕಡಲತೀರಗಳಿಗೆ ಬ್ಲೂ ಫ್ಲ್ಯಾಗ್ ಮಾನ್ಯತೆ
ಮಂಗಳೂರು : ಕರ್ನಾಟಕ ಪ್ರವಾಸೋದ್ಯಮ ಇಲಾಖೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ 11 ಕಡಲತೀರಗಳನ್ನು ‘ಬ್ಲೂ ಫ್ಲ್ಯಾಗ್’ ಪ್ರಮಾಣೀಕರಣಕ್ಕೆ ಸಾಧ್ಯವಿರುವ ತಾಣಗಳಾಗಿ ಗುರುತಿಸಿದೆ. ಇದರಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರಮುಖ ಕಡಲತೀರಗಳೂ ಸೇರಿವೆ.
Read MoreKerala : ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳಿಗೆ ಕೇರಳದಲ್ಲಿ ನಿರ್ಬಂಧ
ಪ್ರತಿವರ್ಷ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೈ ಯಾತ್ರೆ ಕೈಗೊಳ್ಳುತ್ತಾರೆ. ಲಕ್ಷಾಂತರ ಭಕ್ತರು ಕೇರಳದ ಶಬರಿಮಲೈಗೆ ತೆರಳಿ ಅಯ್ಯಪ್ಪಸ್ವಾಮಿಯ ದರ್ಶನ ಪಡೆದು ತಮ್ಮ ವ್ರತವನ್ನು ಪೂರ್ಣಗೊಳಿಸುತ್ತಾರೆ. ರಾಜ್ಯದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಕರ್ನಾಟಕದಿಂದ ವಾಹನ ಮಾಡಿಕೊಂಡು ಶಬರಿಮಲೆ ಯಾತ್ರೆ ಕೈಗೊಳ್ಳುತ್ತಾರೆ. ಆದ್ರೆ ಕೇರಳದಲ್ಲಿ ಕರ್ನಾಟಕ ನೋಂದಣಿ ವಾಹನಗಳಿಗೆ ನಿರ್ಬಂಧ ಹೇರಿರುವ ಆರೋಪ ಕೇಳಿಬಂದಿದೆ. ಇದರಿಂದ ಕೆರಳಿದ ಅಯ್ಯಪ್ಪಸ್ವಾಮಿ ಭಕ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read More
