ರಾಜ್ಯ
Bangalore : ಬೆಂಗಳೂರು-ವನ್, ಕರ್ನಾಟಕ-ವನ್ ಕೇಂದ್ರಗಳಲ್ಲಿ KSRTC ಟಿಕೆಟ್ ಬುಕ್ಕಿಂಗ್ ಸೌಲಭ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಪ್ರಯಾಣಿಕರಿಗೆ ಮತ್ತೊಂದು ಅನುಕೂಲ ಕಲ್ಪಿಸುವ ಉದ್ದೇಶದಿಂದ ಮುಂಗಡ ಟಿಕೆಟ್ ಕಾಯ್ದಿರಿಸುವ ಸೌಲಭ್ಯವನ್ನು ಬೆಂಗಳೂರು-ಒನ್ ಹಾಗೂ ಕರ್ನಾಟಕ-ಒನ್ ಕೇಂದ್ರಗಳಿಗೆ ವಿಸ್ತರಿಸಿದೆ.
Read MoreBelthangady : ಧನುಪೂಜೆಗೆಂದು ತೆರಳಿದ ಬಾಲಕ ಕೆರೆಯಲ್ಲಿ ಶವವಾಗಿ ಪತ್ತೆ
ಇಂದು ಬೆಳಗ್ಗೆ ಧನುಪೂಜೆಗೆಂದು ತೆರಳಿದ ಬಾಲಕ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕ ಸುಬ್ರಹ್ಮಣ್ಯ ನಾಯಕ್ ಪುತ್ರ ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಸುಮಂತ್ ಪ್ರತಿದಿನ ಸ್ನೇಹಿತರ ಜತೆ ಧನು ಪೂಜೆಗೆ ತೆರಳುತ್ತಿದ್ದ, ಇಂದು ಬೆಳಗ್ಗೆ ಪೂಜೆಗೆ ತೆರಳಿದ ಬಾಲಕ ಬಾರದಧ ಇರುವ ಕುರಿತು ಸ್ನೇಹಿತರಿಂದ ಮಾಹಿತಿ ಬಂದಾಗ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
Read MoreKundapura : ಅಪರೂಪದ ಮಹಿಷಾಸುರ ಮರ್ಧಿನಿ ವಿಗ್ರಹ ಪತ್ತೆ!
ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕುಂದಬರಂದಾಡಿ ಗ್ರಾಮದ ಮೇಲ್ಮುಟ್ ಪ್ರದೇಶದಲ್ಲಿರುವ ಜೀರ್ಣೋದ್ಧಾರಗೊಳ್ಳದ ದೇವಾಲಯವೊಂದರಲ್ಲಿ ಅಪರೂಪದ ಹಾಗೂ ವಿಶಿಷ್ಟ ರೂಪದ ಮಹಿಷಾಸುರಮರ್ದಿನಿ ಶಿಲ್ಪ ಪತ್ತೆಯಾಗಿದೆ ಎಂದು ಪುರಾತತ್ವ ತಜ್ಞ ಹಾಗೂ ಆದಿಮಕಲಾ ಟ್ರಸ್ಟ್ನ ಸ್ಥಾಪಕ ಟ್ರಸ್ಟಿ ಪ್ರೊ. ಮುರುಗೇಶಿ ಟಿ. ತಿಳಿಸಿದ್ದಾರೆ.
Read MoreDakshina Kannada : ದ.ಕ., ಉಡುಪಿ ಸೇರಿ ರಾಜ್ಯದ 11 ಕಡಲತೀರಗಳಿಗೆ ಬ್ಲೂ ಫ್ಲ್ಯಾಗ್ ಮಾನ್ಯತೆ
ಮಂಗಳೂರು : ಕರ್ನಾಟಕ ಪ್ರವಾಸೋದ್ಯಮ ಇಲಾಖೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ 11 ಕಡಲತೀರಗಳನ್ನು ‘ಬ್ಲೂ ಫ್ಲ್ಯಾಗ್’ ಪ್ರಮಾಣೀಕರಣಕ್ಕೆ ಸಾಧ್ಯವಿರುವ ತಾಣಗಳಾಗಿ ಗುರುತಿಸಿದೆ. ಇದರಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರಮುಖ ಕಡಲತೀರಗಳೂ ಸೇರಿವೆ.
Read MoreKerala : ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳಿಗೆ ಕೇರಳದಲ್ಲಿ ನಿರ್ಬಂಧ
ಪ್ರತಿವರ್ಷ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೈ ಯಾತ್ರೆ ಕೈಗೊಳ್ಳುತ್ತಾರೆ. ಲಕ್ಷಾಂತರ ಭಕ್ತರು ಕೇರಳದ ಶಬರಿಮಲೈಗೆ ತೆರಳಿ ಅಯ್ಯಪ್ಪಸ್ವಾಮಿಯ ದರ್ಶನ ಪಡೆದು ತಮ್ಮ ವ್ರತವನ್ನು ಪೂರ್ಣಗೊಳಿಸುತ್ತಾರೆ. ರಾಜ್ಯದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಕರ್ನಾಟಕದಿಂದ ವಾಹನ ಮಾಡಿಕೊಂಡು ಶಬರಿಮಲೆ ಯಾತ್ರೆ ಕೈಗೊಳ್ಳುತ್ತಾರೆ. ಆದ್ರೆ ಕೇರಳದಲ್ಲಿ ಕರ್ನಾಟಕ ನೋಂದಣಿ ವಾಹನಗಳಿಗೆ ನಿರ್ಬಂಧ ಹೇರಿರುವ ಆರೋಪ ಕೇಳಿಬಂದಿದೆ. ಇದರಿಂದ ಕೆರಳಿದ ಅಯ್ಯಪ್ಪಸ್ವಾಮಿ ಭಕ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read MoreUdupi : ಎಳ್ಳಾರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ರಾಷ್ಟ್ರಮಟ್ಟದ ಪ್ರಶಸ್ತಿಗೆ ಶಿಫಾರಸು
ಮುಳ್ಕಾಡು ಶಾಲೆ ಸೇರಿದಂತೆ 8 ಶಾಲೆಗಳನ್ನು ಮುಂದಿನ ಹಂತದ ಪ್ರಕ್ರಿಯೆಗೆ ಆಯ್ಕೆ ಮಾಡಲಾಯಿತು. ಈ ಪ್ರಕ್ರಿಯೆ ನಂತರ ಸರ್ವ ಶಿಕ್ಷಣ ಅಭಿಯಾನ ರಾಜ್ಯ ಕಚೇರಿಯ ತಂಡ ಜಿಲ್ಲೆಗೆ ಭೇಟಿ ನೀಡಿ ಶಾಲೆಯ ಸ್ವಚ್ಛತೆ, ಸೌಕರ್ಯಗಳು, ಶಿಕ್ಷಣದ ಕ್ರಮ, ಶೌಚಾಲಯ, ಪರಿಸರ ವ್ಯವಸ್ಥೆ ಇತ್ಯಾದಿಗಳನ್ನು ಪರಿಶೀಲಿಸಿತು. ಈ ಎಲ್ಲವನ್ನು ಪರಿಗಣಿಸಿ ನೀಡಲಾದ ಶ್ರೇಣೀಕರಣದ ಮೇಲೆ ಮುಳ್ಕಾಡು ಶಾಲೆಯನ್ನು ರಾಷ್ಟ್ರಮಟ್ಟಕ್ಕೆ ಶಿಫಾರಸು ಮಾಡಲಾಯಿತು.
Read Moreಇಸ್ರೋದ PSLV – C62 ರಾಕೆಟ್ ಹಾರಾಟದಲ್ಲಿ ತಾಂತ್ರಿಕ ದೋಷ
ಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋ ಉಡಾವಣೆ ಮಾಡಿದ PSLV – C62 ರಾಕೆಟ್ ಹಾರಾಟದ ಕೊನೆಯ ಹಂತದಲ್ಲಿ ತಾಂತ್ರಿಕ ದೋಷಗಳು ಕಂಡುಬಂದಿವೆ. ಮಿಷನ್ ಪ್ರಗತಿಯ ಅಂತಿಮ ಸ್ಥಿತಿಯನ್ನು ಇಸ್ರೋ ಶೀಘ್ರದಲ್ಲೇ ಪ್ರಕಟಿಸುತ್ತದೆ.
Read Moreಪಾಂಡೇಶ್ವರ ಠಾಣೆಯ ಎಎಸ್ಐ ಹರಿಶ್ಚಂದ್ರ ಬೇರಿಕೆ ನಿಧನ
ಪಾಂಡೇಶ್ವರ ಠಾಣೆಯ ಎಎಸ್ಐ ಹರಿಶ್ಚಂದ್ರ ಬೇರಿಕೆ (57) ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. 10 ವರ್ಷದ ಹಿಂದೆ ಎಎಸ್ಐ ಆಗಿ ಭಡ್ತಿ ಪಡೆದಿದ್ದರು.
Read Moreಚಿಕ್ಕಬಳ್ಳಾಪುರ : ಸಂಕ್ರಾಂತಿ ಪ್ರಯುಕ್ತ ಅಂತಾರಾಜ್ಯ ಎತ್ತಿನ ಗಾಡಿ ಸ್ಪರ್ಧೆ
ಸಂಕ್ರಾಂತಿ ಹಬ್ಬದ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹುಡುಗೂರು ಗ್ರಾಮದಲ್ಲಿ ರೈತಮಿತ್ರ ಬಳಗದ ವತಿಯಿಂದ ಆಯೋಜಿಸಲಾದ ರೋಚಕ ಎತ್ತಿನಗಾಡಿ ಓಟ ಸ್ಪರ್ಧೆ ಪ್ರೇಕ್ಷಕರನ್ನು ಕುತೂಹಲದಿಂದ ಕಂಗೊಳಿಸುವಂತೆ ಮಾಡಿತು. ಕರ್ನಾಟಕದ ವಿವಿಧ ಭಾಗಗಳಿಂದ ಮಾತ್ರವಲ್ಲದೆ ಪಕ್ಕದ ರಾಜ್ಯವಾದ ಆಂಧ್ರಪ್ರದೇಶದಿಂದಲೂ ನೂರಾರು ರೈತರು ತಮ್ಮ ಎತ್ತುಗಳೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಆಗಮಿಸಿದ್ದು, ಈ ಕಾರ್ಯಕ್ರಮಕ್ಕೆ ನಿಜವಾದ ಅಂತರರಾಜ್ಯ ಸ್ವರೂಪ ನೀಡಲಾಯಿತು.
Read MorePuttur: ಮೂರು ದಿನಗಳ ಕೃಷಿ ಮೇಳ – ಸಸ್ಯ ಜಾತ್ರೆ ಸಮಾರೋಪ
ಕೃಷಿಕ ಸಮಾಜದ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಜಾತ್ರಾ ಗದ್ದೆಯಲ್ಲಿ ಆಯೋಜಿಸಲಾದ ಮೂರು ದಿನಗಳ ಕೃಷಿ ಮೇಳ ಹಾಗೂ ಸಸ್ಯ ಜಾತ್ರೆ ಜ. 12 ರಂದು ಸಮಾರೋಪಗೊಂಡಿತು. ಕರ್ನಾಟಕ ಪ್ರದೇಶ ಕೃಷಿಕ ಸಮಾಜ, ದಕ್ಷಿಣ ಕನ್ನಡ ಜಿಲ್ಲಾ ಕೃಷಿಕ ಸಮಾಜದ ವತಿಯಿಂದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಟ್ರಸ್ಟ್, ಪುತ್ತೂರು ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಾಲಯ, ಸುದ್ದಿ ಮಾಹಿತಿ ಟ್ರಸ್ಟ್ ಮತ್ತು ಅರಿವು ಕೇಂದ್ರ ಹಾಗೂ ರೈತ ಕುಡ್ಲ ಪ್ರತಿಷ್ಠಾನದ ಸಹಯೋಗದಲ್ಲಿ ಈ ಮೇಳವನ್ನು ಆಯೋಜಿಸಲಾಗಿತ್ತು.
Read More
