ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಅಭಾವ ಉಂಟಾಗಿದ್ದು, ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದು ಪೂರೈಕೆಯನ್ನು ಸಹಜ ಸ್ಥಿತಿಗೆ ತರಲು ಮನವಿ ಮಾಡಿದ್ದಾರೆ.
ಬೆಂಗಳೂರು ಹೋಟೆಲ್ ಅಸೋಸಿಯೇಷನ್ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಸಿಎಂ ಪತ್ರ ಬರೆದಿದ್ದಾರೆ. ಗ್ಯಾಸ್ ಕೊರತೆಯಿಂದಾಗಿ ಸಾವಿರಾರು ಹೋಟೆಲ್ಗಳು ಮತ್ತು ಕೆಫೆಗಳು ಮುಚ್ಚುವ ಭೀತಿ ಎದುರಿಸುತ್ತಿವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಯಾಗುತ್ತಿದೆಯೇ ಎಂಬ ಬಗ್ಗೆ ತನಿಖೆ ನಡೆಸಬೇಕು ಮತ್ತು ತೈಲ ಕಂಪನಿಗಳಿಗೆ ಹೆಚ್ಚಿನ ದಾಸ್ತಾನು ಬಿಡುಗಡೆ ಮಾಡಲು ಸೂಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು, ಚೆನ್ನೈ, ಮುಂಬೈ ಹೋಟೆಲ್ಗಳಲ್ಲಿ ಗ್ಯಾಸ್ ಅಭಾವ: ಕೇಂದ್ರ ಸರ್ಕಾರದಿಂದ ಮಹತ್ವದ ಸ್ಪಷ್ಟನೆ!
ಹೋಟೆಲ್ಗಳು ಮುಚ್ಚಿದರೆ ಅಥವಾ ದರ ಏರಿಕೆಯಾದರೆ ಅದು ಸಾಮಾನ್ಯ ಜನರ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಕೇಂದ್ರ ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ ಪೂರೈಕೆಯಲ್ಲಿನ ಅಡೆತಡೆಗಳನ್ನು ನಿವಾರಿಸಬೇಕು ಎಂದು ಸಿಎಂ ಆಗ್ರಹಿಸಿದ್ದಾರೆ.ಮಧ್ಯಪ್ರಾಚ್ಯದಲ್ಲಿನ ಯುದ್ಧದ ಕಿಚ್ಚು ಮತ್ತು ಪೂರೈಕೆ ಸರಪಳಿಯಲ್ಲಿನ ವ್ಯತ್ಯಯದಿಂದಾಗಿ ವಾಣಿಜ್ಯ ಸಿಲಿಂಡರ್ಗಳ ಲಭ್ಯತೆ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಈಗಾಗಲೇ ಕಪ್ಪು ದಂಧೆ ನಡೆಯುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

