ಇಂದಿನಿಂದ ಅಂದರೆ ಸಂಜೆಯ ವೇಳೆಗೆ ಯುಗಾದಿಯ ಪರ್ವಕಾಲ ಆರಂಭವಾಗಲಿದೆ. ನಾಳೆಯವರೆಗೆ ಈ ಹಬ್ಬ ಸಂಭ್ರಮ ಇರಲಿದೆ. ಭಾರತೀಯ ಸಂಪ್ರದಾಯದಂತೆ ಹೊಸ ವರ್ಷದ ಆರಂಭ. ಗ್ರಹಗತಿಗಳ ಬದಲಾವಣೆ ಮತ್ತು ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಇಂದಿನ ರಾಶಿ ಭವಿಷ್ಯ ಕುತೂಹಲ ಮೂಡಿಸಿದೆ.
ಮೇಷ: ಇಂದು ನಿಮಗೆ ಹೊಸ ಕಾರ್ಯಗಳಿಗೆ ಚಾಲನೆ ನೀಡಲು ಶುಭ ದಿನ. ಕುಟುಂಬದಲ್ಲಿ ಸಂತೋಷ ನೆಲೆಸಲಿದೆ. ಆರ್ಥಿಕ ಲಾಭದ ಸಾಧ್ಯತೆ ಇದೆ.

ವೃಷಭ: ದೂರದ ಪ್ರಯಾಣದ ಯೋಗವಿದೆ. ಹಳೆಯ ಮಿತ್ರರ ಭೇಟಿಯಾಗಲಿದೆ. ಆರೋಗ್ಯದ ಕಡೆ ಗಮನವಿರಲಿ.
ಮಿಥುನ: ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಶುಭ ಸುದ್ದಿಯಿದೆ.
ಕರ್ಕಾಟಕ: ಇಂದು ಮಾನಸಿಕ ನೆಮ್ಮದಿ ಇರಲಿದೆ. ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುವಿರಿ. ಹಿರಿಯರ ಆಶೀರ್ವಾದ ಪಡೆಯಿರಿ.
ಸಿಂಹ: ವ್ಯವಹಾರದಲ್ಲಿ ಧನ ಲಾಭವಾಗಲಿದೆ. ಹೊಸ ಹೂಡಿಕೆಗೆ ಇಂದು ಸಕಾಲ. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ.
ಕನ್ಯಾ: ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ದೈವಿಕ ಚಿಂತನೆಯಿಂದ ಮನಸ್ಸಿಗೆ ಶಾಂತಿ ಸಿಗಲಿದೆ.
ತುಲಾ: ಶುಭ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಉದ್ಯೋಗದಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಾಗಲಿದೆ.
ವೃಶ್ಚಿಕ: ಇಂದು ಸ್ವಲ್ಪ ಎಚ್ಚರಿಕೆಯಿಂದ ಇರಬೇಕಾದ ದಿನ. ಶತ್ರುಗಳ ಕಾಟವಿರಬಹುದು. ತಾಳ್ಮೆಯಿಂದ ಸಮಸ್ಯೆಗಳನ್ನು ಎದುರಿಸಿ.
ಧನುಸ್ಸು: ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ. ಮನೆಗೆ ಅತಿಥಿಗಳ ಆಗಮನವಾಗಬಹುದು. ಸಂತೋಷದ ವಾತಾವರಣವಿರುತ್ತದೆ.
ಮಕರ: ಭೂಮಿ ಅಥವಾ ವಾಹನ ಖರೀದಿಯ ಯೋಗವಿದೆ. ಸರ್ಕಾರಿ ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳಲಿವೆ.
ಕುಂಭ: ವೃತ್ತಿ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರಲಿವೆ. ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ.
ಮೀನ: ಕಲಾವಿದರಿಗೆ ಮತ್ತು ಸಾಹಿತಿಗಳಿಗೆ ಉತ್ತಮ ಅವಕಾಶಗಳು ದೊರೆಯಲಿವೆ. ಕುಟುಂಬದ ಬೆಂಬಲ ಸದಾ ಇರಲಿದೆ.
ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

