Breaking News

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

new delhi

‌ನವದೆಹಲಿ : 2020ರಲ್ಲಿ ದೆಹಲಿಯಲ್ಲಿ  ನಡೆದ  ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ಸುಪ್ರೀಂ ಕೋರ್ಟ್​ ಸೋಮವಾರ ವಜಾಗೊಳಿಸಿದೆ. ಡಿಸೆಂಬರ್ 10ರಂದು ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್ಜಿ) ಎಸ್.ವಿ. ರಾಜು ಮತ್ತು ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಸಿಂಘ್ವಿ, ಸಿದ್ಧಾರ್ಥ ದವೆ, ಸಲ್ಮಾನ್ ಖುರ್ಷಿದ್ ಮತ್ತು ಸಿದ್ಧಾರ್ಥ್ ಲೂಥ್ರಾ ಅವರ ವಾದಗಳನ್ನು ಆಲಿಸಿದ ನಂತರ ತೀರ್ಪನ್ನು ಕಾಯ್ದಿರಿಸಿತ್ತು.

ದೆಹಲಿ ಗಲಭೆಯ ಏಳು ಆರೋಪಿಗಳಲ್ಲಿ ಐವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಆದರೆ ಶಾರ್ಜೀಲ್ ಇಮಾಮ್ ಮತ್ತು ಉಮರ್ ಖಾಲಿದ್​ಗೆ ಜಾಮೀನು ನೀಡಲು ನಿರಾಕರಿಸಿದ್ದು ಪ್ರತಿಯೊಂದು ಪ್ರಕರಣವನ್ನು ಪ್ರತ್ಯೇಕವಾಗಿ ಪರಿಶೀಲಿಸಿರುವುದಾಗಿ ನ್ಯಾಯಾಲಯ ಹೇಳಿದೆ. ಪೊಲೀಸರು ಸಂಗ್ರಹಿಸಿದ ಸಾಕ್ಷ್ಯಗಳ ಆಧಾರದ ಮೇಲೆ, ಈ ಗಲಭೆಯಲ್ಲಿ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಪ್ರಮುಖ ಪಾತ್ರವಿದೆ ಎಂಬುದು ತಿಳಿದುಬಂದಿದೆ. ಇಬ್ಬರೂ ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಮೇಲ್ಮನವಿ ಸಲ್ಲಿಸಬಹುದು ಎಂದು ನ್ಯಾಯಾಲಯ ಹೇಳಿದೆ.

Advertisement

 ತೀರ್ಪನ್ನು ಓದುವಾಗ, ಪೀಠವು ಜಾಮೀನು ಕೋರುವವರಿಗೆ ಕಠಿಣ ಷರತ್ತುಗಳನ್ನು ವಿಧಿಸಬಹುದು ಎಂದು ಹೇಳಿದ್ದು, ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಪಾತ್ರಗಳು ಇತರರಿಗಿಂತ ಭಿನ್ನವಾಗಿವೆ. ಎಲ್ಲ ಆರೋಪಿಗಳ ಪಾತ್ರಗಳು ಒಂದೇ ಆಗಿಲ್ಲ ಎಂದು ದಾಖಲೆ ತೋರಿಸುತ್ತದೆ. ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪಗಳು ಬಲವಾಗಿವೆಯೇ ಎಂದು ಪರಿಶೀಲಿಸಬೇಕು. ಎಲ್ಲ ಆರೋಪಿಗಳ ಪಾತ್ರಗಳ ಕುರಿತು ಪ್ರಸ್ತುತಪಡಿಸಲಾದ ಸಂಗತಿಗಳನ್ನು ಸಹ ಪರಿಗಣಿಸಬೇಕು ಎಂದು ಪೀಠ ಹೇಳಿದೆ.

2020ರ ದೆಹಲಿ ಗಲಭೆಗೆ ಪ್ರಚೋದನೆ ನೀಡಲು ಸಂಚು ರೂಪಿಸಿದ ಆರೋಪದ ಮೇಲೆ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರನ್ ಹೈದರ್, ಶಿಫಾ ಅಲಿಯಾಸ್ ರೆಹಮಾನ್, ಶಹದಾಬ್ ಅಹ್ಮದ್ ಮತ್ತು ಮೊಹಮ್ಮದ್ ಸಲೀಂ ಐದು ವರ್ಷಗಳಿಂದ ಜೈಲಿನಲ್ಲಿರಿಸಲಾಗಿದೆ.

ಡಿಸೆಂಬರ್ 10, 2025ರಂದು ವಾದಗಳನ್ನು ಆಲಿಸಿದ ನಂತರ ನ್ಯಾಯಾಲಯವು ಜಾಮೀನಿನ ನಿರ್ಧಾರವನ್ನು ಕಾಯ್ದಿರಿಸಿತ್ತು. ದೆಹಲಿ ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯವು ಅವರಿಗೆ ಜಾಮೀನು ನಿರಾಕರಿಸಿದೆ.

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು