ತುಮಕೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಮೂವರು ಸಾವು

ತುಮಕೂರು: ಕರ್ನಾಟಕದ ತುಮಕೂರು ಜಿಲ್ಲೆಯ ನೆಲಹಾಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ, ಬೆಂಗಳೂರಿನ ಆರು ಜನರು ಸಾಗುತ್ತಿದ್ದ ಮಾರುತಿ ಎರ್ಟಿಗಾ ಕಾರು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಉಳಿದ ಮೂವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Delhi : 5 ವರ್ಷಗಳ‌ ನಂತರ ಮೊದಲ ಬಾರಿ ಚಳಿಯಲ್ಲಿ ಗಣರಾಜ್ಯೋತ್ಸವ ಆಚರಣೆ

Advertisement

ಗೋಕರ್ಣ, ಮುರುಡೇಶ್ವರ ಮತ್ತು ಉಡುಪಿಗೆ ಪ್ರವಾಸ ಮುಗಿಸಿ ಹಿಂತಿರುಗುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದ್ದು, ತುಮಕೂರು ಎಸ್‌ಪಿ ಕೆ.ವಿ. ಅಶೋಕ್ ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಗುಂಪು ಗೋಕರ್ಣ, ಮುರುಡೇಶ್ವರ ಮತ್ತು ಉಡುಪಿಯ  ಕರಾವಳಿ ತಾಣಗಳಲ್ಲಿ ವೀಕೆಂಡ್ ಟ್ರಿಪ್ ಮುಗಿಸಿ ತಮ್ಮ ಮಾರುತಿ ಎರ್ಟಿಗಾದಲ್ಲಿ ಬೆಂಗಳೂರಿಗೆ ಹಿಂತಿರುಗುತ್ತಾ ಇದ್ದರು. ಮುಂಜಾವಿನ ಸಮಯದಲ್ಲಿ NH 48 ರಲ್ಲಿ ನೆಲಹಾಲ್ ಸಮೀಪಿಸುತ್ತಿದ್ದಂತೆ ಕಾರು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿತು, ಅಪಘಾತದ ತೀವ್ರತೆಗೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಎಲ್ಲಾ ಬೆಂಗಳೂರಿನವರೇ. ಸಂತಸದಲ್ಲಿದ್ದ ಕುಟುಂದಲ್ಲಿ ಈಗ ಕಣ್ಣೀರಿನ ಹೊಳೆ ಹರಿಯುತ್ತಿದೆ.

Advertisement

ಅಪಘಾತದ ಭೀಕರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ, ಒಬ್ಬನ ಸ್ಥಿತಿ ಗಂಭೀರವಾಗಿದೆ ಮತ್ತು ಇಬ್ಬರು ಸಣ್ಣಪುಟ್ಟ ಗಾಯಗಳಾಗಿದೆ.

ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ತನಿಖೆಯ ನೇತೃತ್ವ ವಹಿಸಿದ್ದರು, ಅವರು ಅವಶೇಷಗಳನ್ನು ವೈಯಕ್ತಿಕವಾಗಿ ಪರಿಶೀಲಿಸಿದರು ಮತ್ತು ವಿಧಿವಿಜ್ಞಾನ ತಜ್ಞರೊಂದಿಗೆ ಸಮನ್ವಯ ಸಾಧಿಸಿದರು. ಪ್ರಾಥಮಿಕ ವರದಿ ಪ್ರಕಾರ ನಿದ್ದೆಯಲ್ಲಿ ವಾಹನ ಚಾಲನೆಯೇ ಎಂದು ತಿಳಿದು ಬಂದಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು