ಹಿಂದಿ ತೆಗೆದುಹಾಕಿಲ್ಲ: ಹೈಕೋರ್ಟ್ ಸ್ಪಷ್ಟನೆ

ಬೆಂಗಳೂರು :  ಎಸ್ ಎಸ್ ಎಲ್ ಸಿ ಮೂರನೇ ಭಾಷೆ ಹಿಂದಿ ಪರೀಕ್ಷೆಯಲ್ಲಿ ಅಂಕಗಳ ಬದಲಾಗಿ ಗ್ರೇಡಿಂಗ್  ವ್ಯವಸ್ಥೆ ಜಾರಿಗೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಯನ್ನು ಕರ್ನಾಟಕ ಹೈಕೋರ್ಟ್‌ ತಿರಸ್ಕರಿಸಿದೆ. ಜೊತೆಗೆ ಅರ್ಜಿದಾರರಿಗೆ ₹1 ಲಕ್ಷ ದಂಡ ವಿಧಿಸಿದೆ.

ಈ ಅರ್ಜಿ ಶಿಕ್ಷಣ ಸಚಿವರ ಹೇಳಿಕೆಯನ್ನು ಆಧರಿಸಿ ಸಲ್ಲಿಸಲಾಗಿತ್ತು ಎಂದು ಅರ್ಜಿದಾರರು ವಾದಿಸಿದ್ದರು. ಆದರೆ ನ್ಯಾಯಾಲಯ ಹೇಳುವಂತೆ, ಆ ಹೇಳಿಕೆ ನಿಜವಾಗಿಯೂ ಯಾವುದೇ ಅಧಿಕೃತ ಘೋಷಣೆ ಅಲ್ಲದೆ, ಪತ್ರಿಕಾ ವರದಿಯಲ್ಲಿನ ತಪ್ಪು ಅರ್ಥೈಸಿಕೆಯಿಂದ ಉಂಟಾದದ್ದು ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ ಪೋಷಕರಿಗೆ ಭರ್ಜರಿ ಸಿಹಿ ಸುದ್ದಿ: 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 2 ತಿಂಗಳ ಸಡಿಲಿಕೆ ನೀಡಿದ ಸರ್ಕಾರ

ಮುಖ್ಯ ನ್ಯಾಯಮೂರ್ತಿ ವಿವು ಭಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರನ್ನೊಳಗೊಂಡ ಪೀಠ, ಈ PIL ಸಾರ್ವಜನಿಕ ಹಿತಾಸಕ್ತಿಗಾಗಿ ಸಲ್ಲಿಸಲ್ಪಟ್ಟದ್ದಲ್ಲ, ಬದಲಿಗೆ ಪ್ರಚಾರ ಪಡೆಯುವ ಉದ್ದೇಶದಿಂದ ಸಲ್ಲಿಸಲಾಗಿದೆ ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.

ಆರಂಭದಲ್ಲಿ ₹50,000 ದಂಡ ವಿಧಿಸಿದ್ದ ನ್ಯಾಯಾಲಯ, ನಂತರ ಅರ್ಜಿದಾರರ ವಾದವನ್ನು ಗಮನಿಸಿ ಅದನ್ನು ₹1 ಲಕ್ಷಕ್ಕೆ ಹೆಚ್ಚಿಸಿತು. ಈ ಮೊತ್ತವನ್ನು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ಪಾವತಿಸಲು ಸೂಚಿಸಲಾಗಿದೆ.

ಇದೇ ವೇಳೆ, ಮೂರನೇ ಭಾಷೆಗೆ ಅಂಕಗಳನ್ನು ನೀಡುವುದನ್ನು ಕೈಬಿಟ್ಟು ಗ್ರೇಡ್ ನೀಡುವ ವ್ಯವಸ್ಥೆ ಜಾರಿಗೊಳಿಸುವ ಸರ್ಕಾರದ ಕ್ರಮ ವಿದ್ಯಾರ್ಥಿಗಳ ಒಟ್ಟು ಫಲಿತಾಂಶಕ್ಕೆ ಪರಿಣಾಮ ಬೀರುವುದಿಲ್ಲ ಎಂಬುದನ್ನೂ ನ್ಯಾಯಾಲಯ ಉಲ್ಲೇಖಿಸಿದೆ

ರಾಜ್ಯದ ಹೆಚ್ಚಿನ ಸುದ್ದಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು