ಅಜ್ಜಾವರ: ಇಲ್ಲಿನ ಮೆದಿನಡ್ಕ ಶ್ರೀ ಮುತ್ತುಮಾರಿಯಮ್ಮ ದೇವಾಲಯದ ಆವರಣದಲ್ಲಿ ಸುಮಾರು 3.50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ನೆಲಹಾಸನ್ನು ಸುಳ್ಯ ಶಾಸಕಿ ಭಗೀರಥಿ ಮುರುಳ್ಯ ಅದ್ಧೂರಿಯಾಗಿ ಉದ್ಘಾಟಿಸಿದರು.
ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ಸುಸಜ್ಜಿತ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ನೂತನ ನೆಲಹಾಸನ್ನು ಗಣ್ಯರ ಸಮ್ಮುಖದಲ್ಲಿ ಲೋಕಾರ್ಪಣೆಗೊಳಿಸಲಾಗಿದ್ದು, ಈ ಸುಧಾರಣೆಯು ದೇಗುಲದ ಸೌಂದರ್ಯವನ್ನು ಹೆಚ್ಚಿಸುವುದಲ್ಲದೆ ಭಕ್ತರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಧಾರ್ಮಿಕ ಕೇಂದ್ರಗಳ ಅಭಿವೃದ್ಧಿ ಸಮಾಜದ ಒಳಿತಿಗಾಗಿ ಅಗತ್ಯವಾಗಿದ್ದು, ಎಲ್ಲರೂ ಒಗ್ಗಟ್ಟಾಗಿ ಇಂತಹ ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ: ಪಿಯುಸಿ ರಿಸಲ್ಟ್ ಎಫೆಕ್ಟ್: ನಿರೀಕ್ಷಿತ ಅಂಕ ಬರದ್ದಕ್ಕೆ ಮನನೊಂದು ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ!

ಕಾರ್ಯಕ್ರಮದಲ್ಲಿ ಪ್ರಮುಖರಾದ ಶುಬೋದ್ ಶೆಟ್ಟಿ ಮೆನಾಲ, ರಾಜೇಶ ರೈ ಮೆನಾಲ, ವಿಕ್ರಂ ಅಡ್ಪಂಗಾಯ, ವಸಂತ ನಡುಬೈಲು, ಕಿಟ್ಟಣ್ಣ ರೈ ಮೆನಾಲ, ನಯನ ರೈ ಮೆನಾಲ, ಚಂದ್ರಶೇಖರ ಕೇರ್ಪಳ, ಚಂದ್ರಶೇಖರ ನೆಡಿಲು, ದಯಾಳ್ ಮೇದಿನಡ್ಕ, ರಮೇಶ ಮೆದಿನಡ್ಕ ಸೇರಿದಂತೆ ನೂರಾರು ಭಕ್ತಾದಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


