ಪುತ್ತೂರು : ಪ್ರಚೋದನಾಕಾರಿ ಭಾಷಣ ಆರೋಪದಡಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಮೇಲೆ ಪುತ್ತೂರಿನಲ್ಲಿ ಕೇಸ್ ದಾಖಲಾಗಿರುವುದು ವರದಿಯಾಗಿದೆ.
ಇದನ್ನೂ ಓದಿ : Karnataka Session: ಎರಡು ಲೈನ್ ಭಾಷಣ ಮಾಡಿದ ಕರ್ನಾಟಕ ರಾಜ್ಯಪಾಲ ಗೆಹ್ಲೋಟ್

ವಿದ್ಯಾರ್ಥಿಗಳು ಹಾಗೂ ಪೋಷಕರ ಎದುರು ವಿವಾದಾತ್ಮಕ ಹೇಳಿಕೆ ನೀಡಿದ ಡಾ. ಪ್ರಭಾಕರ್ ಭಟ್ ಇವರು ಪುತ್ತೂರಿನ ಖಾಸಗಿ ಕಾಲೇಜು ಕಾರ್ಯಕ್ರಮದಲ್ಲಿ ಕೋಮುದ್ವೇಷದ ಭಾಷಣ ಮಾಡಿದ್ದು, ಭಾಷಣ ಪ್ರಸಾರ ಮಾಡಿದ ‘ವಿಕಸನ ಟಿವಿ’ ಯೂಟ್ಯೂಬ್ ಚಾನಲ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧವೂ ಕೇಸ್ ದಾಖಲಾಗಿರುತ್ತದೆ.
ಭಾರತೀಯ ನ್ಯಾಯ ಸಂಹಿತೆ (BNS) ಅಡಿ ವಿವಿಧ ಗಂಭೀರ ಸೆಕ್ಷನ್ಗಳ ಮೂಲಕ ದಾಖಲಾದ ಎಫ್ಐಆರ್, ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಹಾಗೂ ಹಿಂಸೆಗೆ ಪ್ರಚೋದನೆ ನೀಡಿದ ಆರೋಪದಡಿ ಪುತ್ತೂರು ನಗರ ಠಾಣೆಯಲ್ಲಿ, ಪುತ್ತೂರು ನಿವಾಸಿ ರಾಮಚಂದ್ರ ಕೆ. ನೀಡಿದ ದೂರಿನ ಮೇರೆಗೆ ಪೋಲಿಸ್ ಕ್ರಮ ಕೈಗೊಂಡಿದ್ದು, ಇದು ಜನವರಿ 12ರಂದು ನಡೆದಿದ್ದ ಕಾರ್ಯಕ್ರಮ ಎನ್ನಲಾಗಿದೆ.
ಇದನ್ನೂ ಓದಿ : ಕುಕ್ಕೆ ಸುಬ್ರಮಣ್ಯ ದೇವಳದ ಎರಡು ತಿಂಗಳ ಆದಾಯ ಎಷ್ಟು ಗೊತ್ತ?
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

