ಕೋಚ್ಚಿ: ಲೈಂಗಿಕ ಕಿರುಕುಳ ಆರೋಪದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮಲಯಾಳಂ ನಿರ್ದೇಶಕ ರಂಜಿತ್ ಅವರಿಗೆ ಕರ್ನಾಕುಳಂ ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ನ್ಯಾಯಾಲಯವು ಜಾಮೀನು ನೀಡುವ ವೇಳೆ ಕೆಲವು ಕಠಿಣ ಷರತ್ತುಗಳನ್ನು ವಿಧಿಸಿದೆ. ಆರೋಪಿಯು ತನ್ನ ಪಾಸ್ಪೋರ್ಟ್ ಅನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕು, ವಾರಕ್ಕೆ ಒಮ್ಮೆ ಪೊಲೀಸ್ ಠಾಣೆಗೆ ಹಾಜರಾಗಬೇಕು ಹಾಗೂ ತನಿಖೆ ನಡೆಯುವ ಅವಧಿಯಲ್ಲಿ ಎರ್ನಾಕುಲಂ ಪ್ರದೇಶವನ್ನು ನ್ಯಾಯಾಲಯದ ಅನುಮತಿಯಿಲ್ಲದೆ ತೊರೆಯಬಾರದು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ ಪುತ್ತೂರು ಮಹಾಲಿಂಗೇಶ್ವರನ ವಾರ್ಷಿಕ ಜಾತ್ರೆಗೆ ಅದ್ಧೂರಿ ಚಾಲನೆ: ಭಕ್ತಿಯ ಪರಾಕಾಷ್ಠೆಯಲ್ಲಿ ಧ್ವಜಾರೋಹಣ!
ಈ ಪ್ರಕರಣವು ಫೋರ್ಟ್ ಕೊಚ್ಚಿ ಪ್ರದೇಶದಲ್ಲಿ ನಡೆದ ಚಿತ್ರೀಕರಣದ ವೇಳೆ ನಟಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ದಾಖಲಾಗಿತ್ತು. ಆಕೆಯ ದೂರಿನ ಮೇರೆಗೆ ಮಾರ್ಚ್ 31ರಂದು ರಂಜಿತ್ ಅವರನ್ನು ಪೊಲೀಸರು ಬಂಧಿಸಿದ್ದರು.

ಪ್ರಾಸಿಕ್ಯೂಷನ್ ವಶದಲ್ಲಿರಿಸಲು ಮಾಡಿದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಪ್ರಮುಖ ಸಾಕ್ಷ್ಯ ಸಂಗ್ರಹ ಮತ್ತು ಸ್ಥಳ ಪರಿಶೀಲನೆ ಕಾರ್ಯಗಳು ಈಗಾಗಲೇ ಪೂರ್ಣಗೊಂಡಿವೆ ಎಂದು ಪರಿಗಣಿಸಿದೆ.
ಇದೀಗ ಜಾಮೀನಿನ ಷರತ್ತುಗಳೊಂದಿಗೆ ರಂಜಿತ್ ಬಿಡುಗಡೆಗೊಂಡಿದ್ದು, ಪ್ರಕರಣದ ತನಿಖೆ ಮುಂದುವರಿಯುತ್ತಿದೆ.

ಹೆಚ್ಚಿನ ಸುದ್ದಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

