ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಅತ್ಯಂತ ಜನಪ್ರಿಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ (Gruha Lakshmi) ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಈಗ ದೊಡ್ಡ ಮಟ್ಟದ ಆಡಳಿತಾತ್ಮಕ ಬದಲಾವಣೆ ಹಾಗೂ ಮೇಜರ್ ಸರ್ಜರಿಗೆ ಮುಂದಾಗಿದೆ. ಪ್ರಸ್ತುತ ಇಡೀ ರಾಜ್ಯದಲ್ಲಿ ಸುಮಾರು 1 ಕೋಟಿ 30 ಲಕ್ಷಕ್ಕೂ ಅಧಿಕ ಮಹಿಳಾ ಫಲಾನುಭವಿಗಳು ಈ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳ ಆರ್ಥಿಕ ನೆರವನ್ನು ಪಡೆಯುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಯೋಜನೆಯ ಅನುಷ್ಠಾನದಲ್ಲಿ ಕಂಡುಬರುತ್ತಿರುವ ತಾಂತ್ರಿಕ ಲೋಪದೋಷಗಳು ಹಾಗೂ ಸರ್ಕಾರದ ಮೇಲಿನ ಆರ್ಥಿಕ ಹೊರೆಯನ್ನು ಸರಿದೂಗಿಸಲು ಈ ಮಹತ್ವದ ಕ್ರಮಕ್ಕೆ ಕೈಹಾಕಲಾಗಿದೆ.
ಮೂಲಗಳ ಪ್ರಕಾರ, ಗೃಹಲಕ್ಷ್ಮಿ ಯೋಜನೆಯ ಹಣ ದುರುಪಯೋಗವಾಗುತ್ತಿರುವುದನ್ನು ತಡೆಯಲು ಸರ್ಕಾರವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುತ್ತಿದೆ. ತೆರಿಗೆ ಪಾವತಿದಾರರು (Tax Payers) ಹಾಗೂ ಸರ್ಕಾರಿ ನೌಕರರ ಕುಟುಂಬದವರು ಸುಳ್ಳು ಮಾಹಿತಿ ನೀಡಿ ಯೋಜನೆಯ ಲಾಭ ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯು ಫಲಾನುಭವಿಗಳ ಬ್ಯಾಂಕ್ ಖಾತೆ ಹಾಗೂ ಆಧಾರ್ ಕಾರ್ಡ್ಗಳ ಸಮಗ್ರ ಮರುಪರಿಶೀಲನೆ (Re-verification) ನಡೆಸುತ್ತಿದ್ದು, ಅನರ್ಹರ ಖಾತೆಗಳಿಗೆ ಇನ್ನು ಮುಂದೆ ಹಣ ವರ್ಗಾವಣೆಯಾಗುವುದನ್ನು ಶಾಶ್ವತವಾಗಿ ತಡೆಹಿಡಿಯಲಾಗುವುದು.
ಇದನ್ನೂ ಓದಿ:Gruhalakshmi Scheme: ಮಹಿಳೆಯರೇ ಇನ್ಮುಂದೆ ಗೃಹಲಕ್ಷ್ಮೀ ಯೋಜನೆ ಹಣ ಸಿಗಬೇಕಾದರೆ ಈ ಪ್ರಮಾಣಪತ್ರ ಕಡ್ಡಾಯ
ಇತ್ತೀಚಿನ ದಿನಗಳಲ್ಲಿ ಸರ್ವರ್ ಸಮಸ್ಯೆ ಹಾಗೂ ಇ-ಕೆವೈಸಿ (e-KYC) ಪ್ರಕ್ರಿಯೆಗಳು ಪೂರ್ಣಗೊಳ್ಳದ ಕಾರಣ ಹಲವು ಅರ್ಹ ಮಹಿಳೆಯರ ಖಾತೆಗಳಿಗೆ ಸಕಾಲದಲ್ಲಿ 2,000 ರೂಪಾಯಿ ಜಮೆಯಾಗುತ್ತಿರಲಿಲ್ಲ. ಈ ಸಮಸ್ಯೆಯನ್ನು ಹೋಗಲಾಡಿಸಲು ಇಡೀ ತಂತ್ರಾಂಶ ವ್ಯವಸ್ಥೆಯನ್ನು ನವೀಕರಿಸಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರದರ್ಶಕತೆ ತರಲು ಮತ್ತು ನಿಜವಾದ ಬಡ ಹಾಗೂ ಅರ್ಹ ಮಹಿಳೆಯರಿಗೆ ಮಾತ್ರ ಈ ಯೋಜನೆಯ ಲಾಭ ಸಿಗುವಂತೆ ಮಾಡಲು ಸರ್ಕಾರ ಈ ಬಿಗ್ ಸರ್ಜರಿಗೆ ಮುಂದಾಗಿದೆ ಎಂದು ದೆಹಲಿ ಮೂಲಗಳು ತಿಳಿಸಿವೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


