ಲಡಾಖ್‌ನಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಭೀಕರ ಪತನ!: ಇಬ್ಬರು ಮೇಜರ್, ಒಬ್ಬರು ಲೆಫ್ಟಿನೆಂಟ್ ಕರ್ನಲ್ ಪವಾಡಸದೃಶ ಪಾರು

ಲೇಹ್ (ಲಡಾಖ್): ಲಡಾಖ್‌ನ ಲೇಹ್ ಬಳಿಯ ಹಿಮಾವೃತ ಮತ್ತು ಕಠಿಣ ಪರ್ವತ ಪ್ರದೇಶವಾದ ಟ್ಯಾಂಗ್ಸ್ಟೆಯಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನಗೊಂಡಿರುವ (Army Helicopter Crash) ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೇ 20 ರಂದು ನಡೆದ ಈ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಅದರಲ್ಲಿದ್ದ ಭಾರತೀಯ ಸೇನೆಯ ಮೂವರು ಅತ್ಯಂತ ಹಿರಿಯ ಅಧಿಕಾರಿಗಳು ಯಾವುದೇ ಪ್ರಾಣಾಪಾಯವಿಲ್ಲದೆ ಅದೃಷ್ಟವಶಾತ್ ಪವಾಡಸದೃಶವಾಗಿ ಪಾರಾಗಿದ್ದಾರೆ ಎಂದು ಸೇನಾ ಪ್ರಧಾನ ಕಚೇರಿ ಇಂದು ಬೆಳಗ್ಗೆ ಅಧಿಕೃತವಾಗಿ ದೃಢಪಡಿಸಿದೆ.

ಸೇನೆಯ ಅತ್ಯಂತ ವಿಶ್ವಾಸಾರ್ಹ ಹಾಗೂ ಸಿಂಗಲ್-ಎಂಜಿನ್ ಹೊಂದಿರುವ ‘ಚೀತಾ’ (Cheetah Helicopter) ಹೆಸರಿನ ಹೆಲಿಕಾಪ್ಟರ್‌ನಲ್ಲಿ ಈ ಘಟನೆ ಸಂಭವಿಸಿದೆ. ವಿಮಾನವನ್ನು ಒಬ್ಬರು ಲೆಫ್ಟಿನೆಂಟ್ ಕರ್ನಲ್ ಮತ್ತು ಒಬ್ಬರು ಮೇಜರ್ ಶ್ರೇಣಿಯ ಪೈಲಟ್ ಅಧಿಕಾರಿಗಳು ಅತ್ಯಂತ ಜಾಗರೂಕತೆಯಿಂದ ಚಲಾಯಿಸುತ್ತಿದ್ದರು. ಇವರೊಂದಿಗೆ ಭಾರತೀಯ ಸೇನೆಯ ಅತ್ಯಂತ ಪ್ರಮುಖ ವಿಭಾಗವಾದ 3ನೇ ಪದಾತಿ ದಳದ (3rd Infantry Division) ಜನರಲ್ ಆಫೀಸರ್ ಕಮಾಂಡಿಂಗ್ ಆಗಿರುವ ಮೇಜರ್ ಜನರಲ್ ಸಚಿನ್ ಮೆಹ್ತಾ ಅವರು ಪ್ರಯಾಣಿಕರಾಗಿ ಅದೇ ಹೆಲಿಕಾಪ್ಟರ್‌ನಲ್ಲಿದ್ದರು.

ಇದನ್ನೂ ಓದಿ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ: ಹರಸಾಹಸ ಪಟ್ಟು ಸೆರೆಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ

ಇಲ್ಲಿದೆ ನೋಡಿ ಫೋಸ್ಟ್:

ಗಡಿ ಭದ್ರತೆ ಮತ್ತು ಸಿಬ್ಬಂದಿ ಪರಿಶೀಲನೆಗಾಗಿ ಟ್ಯಾಂಗ್ಸ್ಟೆ ಪರ್ವತದ ಮೇಲ್ಭಾಗದಲ್ಲಿ ಹಾರಾಟ ನಡೆಸುತ್ತಿದ್ದ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡು ಹೆಲಿಕಾಪ್ಟರ್ ಪತನಗೊಂಡಿದೆ. ಅತ್ಯಂತ ಎತ್ತರವಾದ ಹವಾಮಾನ ವೈಪರೀತ್ಯದ ಮಧ್ಯೆಯೂ ಪೈಲಟ್‌ಗಳು ಸಮಯಪ್ರಜ್ಞೆ ಮೆರೆದಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಹೆಲಿಕಾಪ್ಟರ್ ಸಂಪೂರ್ಣವಾಗಿ ಜಖಂಗೊಂಡಿದ್ದರೂ, ಅಧಿಕಾರಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸೇನೆಯ ರಕ್ಷಣಾ ಪಡೆಗಳು ಗಾಯಗೊಂಡ ಅಧಿಕಾರಿಗಳನ್ನು ಸುರಕ್ಷಿತವಾಗಿ ಸೇನಾ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಮುಕ್ತರಾಗಿದ್ದಾರೆ. ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು