ಮಡಿಕೇರಿ: ಹೊದ್ದೂರು ಗ್ರಾಮದ ಕಬಡಗೇರಿಯ ನಿವೇಶನ ರಹಿತ 47 ಕುಟುಂಬಗಳಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಹಕ್ಕುಪತ್ರ ವಿತರಿಸಿದರು.
ಹಾಗೆಯೇ ಹೊದ್ದೂರು ಗ್ರಾಮದ ಪಾಲೆಮಾಡಿನ 14 ಕುಟುಂಬಗಳಿಗೆ 94ಸಿ ರಡಿ ಹಕ್ಕುಪತ್ರವನ್ನು ಶಾಸಕರು ವಿತರಿಸಿದರು. ಹೊದ್ದೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ನಿವೇಶನ ಹಕ್ಕುಪತ್ರವನ್ನು ವಿತರಿಸಿದರು.

ಇದನ್ನೂ ಓದಿ: ಮತ್ತೋರ್ವ ಕನ್ನಡಿಗ ವಿದೇಶದಲ್ಲಿ ಸಾವು: ಐರ್ಲೆಂಡ್ನಲ್ಲಿ ಕಡಬದ ಯುವಕ ಸಾಂಜೋ ಸುನಿಲ್ ಶವವಾಗಿ ಪತ್ತೆ
ಹೊದವಾಡ ಗ್ರಾಮದ ಅಂಬಲ ಅಂಗನವಾಡಿ ಕೇಂದ್ರವನ್ನು ಇದೇ ಸಂದರ್ಭದಲ್ಲಿ ಶಾಸಕರು ಉದ್ಘಾಟಿಸಿದರು. ಹಾಗೆಯೇ ಹೊದ್ದೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ವಿವಿಧ ಸಂಪರ್ಕ ರಸ್ತೆಗೆ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ನಿವೇಶನ ನೀಡಲಾಗಿರುವ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲು ಪ್ರಯತ್ನಿಸಲಾಗುವುದು ಎಂದರು.
ಹೊದ್ದೂರಿನ ಕಬಡಗೇರಿಗೆ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರನ್ನು ಇಡುವಂತಾಗಬೇಕು ಎಂದು ಸಲಹೆ ಮಾಡಿದ ಶಾಸಕರು ಬಡವರ ಶ್ರೇಯೋಭಿವೃದ್ಧಿಗೆ ಇನ್ನಷ್ಟು ಅಭಿವೃದ್ಧಿ ಕೆಲಸ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

