ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಸಹಾಯ ಮಾಡುವ ಉದ್ದೇಶದಿಂದ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನ (ಎನ್ಒಎಸ್) ಯೋಜನೆಯನ್ನು ಘೋಷಿಸಿದೆ. ಈ ಯೋಜನೆಯಡಿ ಒಟ್ಟು 125 ವಿದ್ಯಾರ್ಥಿವೇತನಗಳನ್ನು ನೀಡಲಾಗುತ್ತದೆ.
ಈ ವಿದ್ಯಾರ್ಥಿವೇತನವು ಆರ್ಥಿಕವಾಗಿ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗಗಳ ವಿದ್ಯಾರ್ಥಿಗಳಿಗೆ ಮಾಸ್ಟರ್ಸ್ ಹಾಗೂ ಪಿಎಚ್ಡಿ ತರಗತಿಗಳನ್ನು ವಿದೇಶದಲ್ಲಿ ಅಭ್ಯಾಸ ಮಾಡಲು ಅವಕಾಶ ಒದಗಿಸುತ್ತದೆ.

ಇದನ್ನೂ ಓದಿ ಅಂಬೇಡ್ಕರ್ ಅವರನ್ನು ವ್ಯಕ್ತಿ ಎನ್ನುವುದಕ್ಕಿಂತ ಶಕ್ತಿ ಎಂದರೆ ತಪ್ಪಾಗಲಾರದು : ವಿಜಯಲಕ್ಷ್ಮಿ
ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಲ್ಕ, ವಸತಿ ವೆಚ್ಚ, ವಿಮೆ ಹಾಗೂ ಇತರೆ ಅಗತ್ಯ ಖರ್ಚುಗಳಿಗೆ ಸಂಪೂರ್ಣ ಆರ್ಥಿಕ ನೆರವು ನೀಡಲಾಗುತ್ತದೆ.ಈ ಯೋಜನೆಯು ವಿಶೇಷವಾಗಿ ಪರಿಶಿಷ್ಟ ಜಾತಿ, ಡಿನೋಟಿಫೈಡ್ ಮತ್ತು ಅರೆ-ಸಂಚಾರಿ ಜನಾಂಗಗಳು, ಭೂಹೀನ ಕೃಷಿ ಕಾರ್ಮಿಕರು ಮತ್ತು ಸಾಂಪ್ರದಾಯಿಕ ಕಲೆಗಾರರಂತಹ ಹಿಂದುಳಿದ ವರ್ಗಗಳಿಗೆ ಪ್ರಯೋಜನಕಾರಿಯಾಗಿದ್ದು, ಅವರ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಉದ್ದೇಶವನ್ನು ಹೊಂದಿದೆ.

ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಮತ್ತು ಆಯ್ಕೆಯಾದವರಿಗೆ ವಿಶ್ವದ ಪ್ರಸಿದ್ಧ ವಿಶ್ವವಿದ್ಯಾಲಯಗಳಲ್ಲಿ ಅಭ್ಯಾಸ ಮಾಡಲು ಅವಕಾಶ ಸಿಗಲಿದೆ.
ಈ ಕ್ರಮವು ಎಲ್ಲಾ ವರ್ಗಗಳಿಗೂ ಸಮಾನ ಶಿಕ್ಷಣಾವಕಾಶ ಒದಗಿಸುವ ಸರ್ಕಾರದ ಪ್ರಯತ್ನದ ಭಾಗವಾಗಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಬೆಳೆಯುವ ಅವಕಾಶವನ್ನು ಕಲ್ಪಿಸುತ್ತದೆ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

