ಸಿಲಿಗುರಿ: ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಕಾರ್ಯಕ್ರಮವೊಂದರಲ್ಲಿ ಆಡಿರುವ ಮಾತುಗಳು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿವೆ. ಬುಡಕಟ್ಟು ಸಮುದಾಯದ ಪ್ರಮುಖ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿಗಳು ಬಾರದೇ ಇರುವುದನ್ನು ಅವರು ನೇರವಾಗಿಯೇ ಪ್ರಶ್ನಿಸಿದ್ದಾರೆ.
ವೇದಿಕೆಯ ಮೇಲೆ ಮಾತನಾಡಿದ ರಾಷ್ಟ್ರಪತಿಗಳು, “ನಾನು ಇಲ್ಲಿಗೆ ಬಂದಾಗ ಮಮತಾ ದೀದಿ ಇರುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರು ಬಂದಿಲ್ಲ. ಬಹುಶಃ ಅವರು ನನ್ನ ಮೇಲೆ ಏನಾದರೂ ಕೋಪಗೊಂಡಿದ್ದಾರೋ ಏನೋ ನನಗೆ ತಿಳಿಯುತ್ತಿಲ್ಲ” ಎಂದು ಮಾರ್ಮಿಕವಾಗಿ ಹೇಳಿದರು.

🚨 Rare Presidential roast!
Droupadi Murmu slams Mamata govt: No proper venue for Santhal tribal conference.“Is Didi angry with me?”#TMC #MamataBanerjee #WestBengal pic.twitter.com/uQTFR5rgmb
— The Alternate Media (@AlternateMediaX) March 7, 2026
ದೇಶದ ಪ್ರಥಮ ಪ್ರಜೆ ರಾಜ್ಯಕ್ಕೆ ಬಂದಾಗ ಮುಖ್ಯಮಂತ್ರಿಗಳು ಹಾಜರಿರುವುದು ಶಿಷ್ಟಾಚಾರ (Protocol). ಆದರೆ ಮಮತಾ ಬ್ಯಾನರ್ಜಿ ಅವರು ಸಮ್ಮೇಳನಕ್ಕೆ ಗೈರಾಗಿದ್ದು ರಾಷ್ಟ್ರಪತಿಗಳ ಅಸಮಾಧಾನಕ್ಕೆ ಪ್ರಮುಖ ಕಾರಣವಾಗಿದೆ.ಸಮ್ಮೇಳನದ ಸ್ಥಳವನ್ನು ಕೊನೆಯ ಕ್ಷಣದಲ್ಲಿ ಬದಲಾಯಿಸಿರುವುದಕ್ಕೂ ರಾಷ್ಟ್ರಪತಿಗಳು ಅಸಮಾಧಾನ ವ್ಯಕ್ತಪಡಿಸಿದರು. “ಇದು ಬುಡಕಟ್ಟು ಸಮುದಾಯದ ಹಬ್ಬ, ಇದನ್ನು ಆಚರಿಸಲು ಅಡ್ಡಿಪಡಿಸುವುದು ಸರಿಯಲ್ಲ” ಎಂದು ಅವರು ಅಭಿಪ್ರಾಯಪಟ್ಟರು.
ಇದನ್ನೂ ಓದಿ: ಶಾಲೆಯಲ್ಲೇ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಮುಖ್ಯ ಶಿಕ್ಷಕಿ ; ವಿಡಿಯೋ ವೈರಲ್!
ರಾಷ್ಟ್ರಪತಿಗಳ ಈ ಹೇಳಿಕೆಯನ್ನು ಬೆಂಬಲಿಸಿರುವ ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರು, “ಇದು ಕೇವಲ ರಾಷ್ಟ್ರಪತಿಗಳಿಗೆ ಮಾಡಿದ ಅವಮಾನವಲ್ಲ, ಇಡೀ ಬುಡಕಟ್ಟು ಸಮುದಾಯಕ್ಕೆ ಮಾಡಿದ ಅವಮಾನ” ಎಂದು ಟಿಎಂಸಿ ಸರ್ಕಾರವನ್ನು ಟೀಕಿಸಿದ್ದಾರೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

