Breaking News

ಕಾಂಗ್ರೆಸ್​​ ವಿರುದ್ಧ ಪ್ರತಿಭಟನೆ: ಸಂಸದ ತೇಜಸ್ವಿ ಸೂರ್ಯ ಪೊಲೀಸ್​​ ವಶಕ್ಕೆ

ಬೆಂಗಳೂರು, ಫೆ.9: ಬೆಂಗಳೂರು ಮೆಟ್ರೋ (Namma Metro) ಟಿಕೆಟ್ ದರ ಏರಿಕೆ ಮಾಡುವ ಪ್ರಸ್ತಾವನೆಯ ವಿರುದ್ಧ ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ನಡೆದ ಪ್ರತಿಭಟನೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ದೊಡ್ಡ ಹೈಡ್ರಾಮವೇ ನಡೆದಿದೆ. ಮೆಟ್ರೋ ದರವನ್ನು ಹೆಚ್ಚಿಸಲು ಬಿಎಂಆರ್‌ಸಿಎಲ್ (BMRCL) ಮುಂದಾಗಿರುವುದನ್ನು ವಿರೋಧಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರೊಂದಿಗೆ ತೇಜಸ್ವಿ ಸೂರ್ಯ ಅವರು ಮೆಟ್ರೋ ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ಪೊಲೀಸರು ಅವರನ್ನು ತಡೆದು ವಶಕ್ಕೆ (Detained) ಪಡೆದಿದ್ದಾರೆ.

ಪೊಲೀಸ್ ವಶದಲ್ಲಿದ್ದಾಗಲೇ ಕಾಂಗ್ರೆಸ್ ಸರ್ಕಾರದ ವಿರುದ್ಧ ತೇಜಸ್ವಿ ಸೂರ್ಯ ತೀವ್ರವಾಗಿ ಕಿಡಿಕಾರಿದ್ದಾರೆ ಗ್ಯಾರಂಟಿ ಯೋಜನೆಗಳಿಗಾಗಿ ಹಣವಿಲ್ಲದೆ ಸರ್ಕಾರ ಈಗ ಸಾಮಾನ್ಯ ಜನರ ಜೇಬಿಗೆ ಕೈ ಹಾಕುತ್ತಿದೆ. ಮೆಟ್ರೋ ದರ ಏರಿಕೆ ಸಾಮಾನ್ಯ ಪ್ರಯಾಣಿಕರಿಗೆ ಮಾಡುವ ದ್ರೋಹ,” ಎಂದು ಆರೋಪಿಸಿದ್ದಾರೆ. ಪೆಟ್ರೋಲ್, ಡೀಸೆಲ್, ಹಾಲಿನ ದರದ ಬೆನ್ನಲ್ಲೇ ಈಗ ಮೆಟ್ರೋ ದರ ಏರಿಕೆ ಮಾಡುತ್ತಿರುವುದು ಕಾಂಗ್ರೆಸ್‌ನ ಲೂಟಿ ತಂತ್ರ ಎಂದು ಟೀಕಿಸಿದ್ದಾರೆ.

Advertisement

ದರ ಏರಿಕೆ ಪ್ರಸ್ತಾವನೆಯನ್ನು ಹಿಂಪಡೆಯದಿದ್ದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಸಿದ್ದಾರೆ. ಮತ್ತೊಂದೆಡೆ, ಸರ್ಕಾರದ ಪರವಾಗಿ ಸಚಿವರು ಪ್ರತಿಕ್ರಿಯಿಸಿದ್ದು, ಮೆಟ್ರೋ ನಿರ್ವಹಣಾ ವೆಚ್ಚ ಹೆಚ್ಚಾಗಿರುವುದರಿಂದ ಮತ್ತು ಕಳೆದ ಹಲವು ವರ್ಷಗಳಿಂದ ದರ ಏರಿಕೆ ಮಾಡದ ಕಾರಣ ಈ ಅನಿವಾರ್ಯತೆ ಎದುರಾಗಿದೆ ಎಂದು ಹೇಳುತ್ತಿದ್ದಾರೆ. ಅಲ್ಲದೆ, ಪ್ರತಿಭಟನೆಯು ಕೇವಲ ರಾಜಕೀಯ ಪ್ರೇರಿತ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: “ಮಿಸ್ಟರ್‌ ಸಿಎಂ ನಾಟಕ ನಿಲ್ಲಿಸಿ” ವಿಶೇಷ ಟೀ-ಶರ್ಟ್‌ ಧರಿಸಿದ ತೇಜಸ್ವಿ ಸೂರ್ಯ; ದೆಹಲಿಗೆ ಓಡಿದ್ದು ಯಾಕೆ?

ಈ ರಾಜಕೀಯ ಜಟಾಪಟಿಯ ನಡುವೆ ಸಾಮಾನ್ಯ ಪ್ರಯಾಣಿಕರು ಆತಂಕದಲ್ಲಿದ್ದಾರೆ. ದರ ಏರಿಕೆಯಾದರೆ ಪ್ರತಿ ತಿಂಗಳು ಸಾವಿರಾರು ರೂಪಾಯಿ ಹೆಚ್ಚುವರಿ ಹೊರೆ ಬೀಳಲಿದೆ ಎಂಬುದು ಸಾರ್ವಜನಿಕರ ದೂರು. ಪ್ರತಿಭಟನೆಯಿಂದಾಗಿ ಕೆಲವು ಮೆಟ್ರೋ ನಿಲ್ದಾಣಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಪ್ರಯಾಣಿಕರ ಸಂಚಾರಕ್ಕೆ ಸ್ವಲ್ಪ ಮಟ್ಟಿನ ಅಡಚಣೆಯಾಗಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು