ಚಿಕ್ಕಮಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ಚುನಾವಣೆಯ ಅಂಚೆ ಮತಪತ್ರಗಳ ಮರು ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರು ಮರು ಎಣಿಕೆಯಲ್ಲೂ ಗೆಲುವು ಸಾಧಿಸಿದ್ದಾರೆ.
ಹೈಕೋರ್ಟ್ ಆದೇಶದಂತೆ ಇಂದು (ಮೇ 2) ನಡೆದ ಮರು ಎಣಿಕೆಯಲ್ಲಿ ಟಿ.ಡಿ. ರಾಜೇಗೌಡ ಅವರು ತಮ್ಮ ಪ್ರತಿಸ್ಪರ್ಧಿಗಿಂತ ಹೆಚ್ಚಿನ ಮತಗಳನ್ನು ಪಡೆಯುವ ಮೂಲಕ ಜಯಭೇರಿ ಬಾರಿಸಿದ್ದಾರೆ.

ಇದನ್ನೂ ಓದಿ: ದೇಶದಲ್ಲೇ ಅತ್ಯಂತ ಹೆಚ್ಚು ಡಿಮ್ಯಾಂಡ್ ಇರುವ ರೈಲು ಪರಶುರಾಮ್ ಎಕ್ಸ್ಪ್ರೆಸ್ : ಕೇರಳ-ಕರ್ನಾಟಕ ಮಾರ್ಗದಲ್ಲಿ ಪ್ರಯಾಣಿಕರ ಅಬ್ಬರ!
ಫಲಿತಾಂಶದ ಹಿನ್ನೆಲೆಯಲ್ಲಿ ಕಾಲೇಜಿನ ಸುತ್ತಮುತ್ತ ಜಾರಿಗೊಳಿಸಲಾಗಿದ್ದ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆಯೇ ಈ ವಿಜಯೋತ್ಸವ ನಡೆಯಿತು.ಈ ಫಲಿತಾಂಶದ ಮೂಲಕ ಶೃಂಗೇರಿ ಕ್ಷೇತ್ರದ ಚುನಾವಣಾ ಫಲಿತಾಂಶದ ಮೇಲಿದ್ದ ಅನಿಶ್ಚಿತತೆ ಈಗ ದೂರವಾದಂತಾಗಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

