ಒಂದೇ ಒಂದು ಮತದ ಅಂತರದಲ್ಲಿ ಸೋತ ಸಚಿವ!: ನಟ ವಿಜಯ್ ಪಕ್ಷದ ಅಭ್ಯರ್ಥಿಗೆ ಸಿಕ್ಕಿತು ರೋಚಕ ಗೆಲುವು

ಚೆನ್ನೈ: ಪ್ರಜಾಪ್ರಭುತ್ವದಲ್ಲಿ ಪ್ರತಿಯೊಂದು ಮತವೂ ಎಷ್ಟು ಮುಖ್ಯ ಎಂಬುದಕ್ಕೆ ತಮಿಳುನಾಡಿನ ತಿರುಪ್ಪತ್ತೂರು ವಿಧಾನಸಭಾ ಕ್ಷೇತ್ರದ ಫಲಿತಾಂಶವು ಅತ್ಯುತ್ತಮ ಉದಾಹರಣೆಯಾಗಿದೆ. ಇಲ್ಲಿ ಆಡಳಿತಾರೂಢ ಡಿಎಂಕೆ (DMK) ಪಕ್ಷದ ಪ್ರಭಾವಿ ಸಚಿವ ಕೆ.ಆರ್. ಪೆರಿಯಕರುಪ್ಪನ್ ಅವರು ನಟ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷದ ಅಭ್ಯರ್ಥಿ ಶ್ರೀನಿವಾಸ ಸೇತುಪತಿ ವಿರುದ್ಧ ಕೇವಲ ಒಂದೇ ಒಂದು ಮತದ ಅಂತರದಿಂದ ಪರಾಭವಗೊಂಡಿದ್ದಾರೆ.

ಮತ ಎಣಿಕೆಯ ಆರಂಭದಿಂದಲೂ ಇಬ್ಬರು ಅಭ್ಯರ್ಥಿಗಳ ನಡುವೆ ಪ್ರತಿ ಸುತ್ತಿನಲ್ಲೂ ಮುನ್ನಡೆಯು ಕ್ಷಣಕ್ಷಣಕ್ಕೂ ಬದಲಾಗುತ್ತಿತ್ತು. ಅಂತಿಮ ಸುತ್ತಿನಲ್ಲಿ ಒಂದು ಮತದ ವ್ಯತ್ಯಾಸ ಕಂಡುಬಂದಾಗ ಮರು ಎಣಿಕೆ ಮಾಡಲಾಯಿತು. ಆದರೂ ಫಲಿತಾಂಶದಲ್ಲಿ ಯಾವುದೇ ಬದಲಾವಣೆಯಾಗದ ಕಾರಣ ಟಿವಿಕೆ ಅಭ್ಯರ್ಥಿ ಶ್ರೀನಿವಾಸ ಸೇತುಪತಿ ಅವರನ್ನು ವಿಜೇತರೆಂದು ಘೋಷಿಸಲಾಯಿತು.

ಇದನ್ನೂ ಓದಿ: ಪುದುಚೇರಿಯಲ್ಲಿ ಎನ್‌ಡಿಎ ಭರ್ಜರಿ ಜಯ; ಸಿಎಂ ರಂಗಸಾಮಿ ಆಡಳಿತಕ್ಕೆ ಮೋದಿ ಮೆಚ್ಚುಗೆ!

ದಶಕಗಳ ಕಾಲದ ರಾಜಕೀಯ ಅನುಭವವಿರುವ ಸಚಿವರನ್ನು ಯುವ ನಾಯಕ ಸೋಲಿಸಿರುವುದು ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷಕ್ಕೆ ಇದು ಚೊಚ್ಚಲ ಚುನಾವಣೆಯಾಗಿದ್ದು, ಮೊದಲ ಪ್ರಯತ್ನದಲ್ಲೇ ಪ್ರಭಾವಿ ನಾಯಕರನ್ನು ಸೋಲಿಸಿರುವುದು ಪಕ್ಷಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದೆ.

ಹೆಚ್ಚಿನ ಸುದ್ದಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು