ಉಡುಪಿ : ಕರ್ನಾಟಕದ ಕರಾವಳಿ ಪ್ರದೇಶದಲ್ಲಿರುವ ಉಡುಪಿ ನಗರವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕವಾಗಿ ಅಪಾರ ಮಹತ್ವವನ್ನು ಹೊಂದಿದೆ. ಶ್ರೀಕೃಷ್ಣ ಮಠವನ್ನು ಕೇಂದ್ರವಾಗಿಸಿಕೊಂಡಿರುವ ಪರ್ಯಾಯ ಮಹೋತ್ಸವ ಉಡುಪಿಯ ಅತ್ಯಂತ ವಿಶಿಷ್ಟ ಮತ್ತು ಪ್ರಾಚೀನ ಸಂಪ್ರದಾಯಗಳಲ್ಲಿ ಒಂದಾಗಿರುತ್ತದೆ. ಈ ಬಾರಿಯ ಪರ್ಯಾಯ ಮಹೋತ್ಸವವು, ಜನವರಿ 17 ಮತ್ತು 18ರಂದು ನಡೆಯಲಿದೆ.
ಈ ಸಮಯ ಲಕ್ಷಾಂತರ ಜನ ಈ ಮಹೋತ್ಸವನ್ನು ಕಣ್ತುಂಬಿಸಿಕೊಳ್ಳಲು ಬರುವ ಕಾರಣ, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಮತ್ತು ಸಂಚಾರ ವ್ಯವಸ್ಥೆಗಳನ್ನು ಜಾರಿಗೆ ತಂದಿವೆ. ಕಾನೂನು ಸುವ್ಯವಸ್ಥೆ ಕಾಪಾಡಲು, ಸಂಚಾರ ನಿಯಂತ್ರಿಸಲು ಹಾಗೂ ಭಕ್ತರು ಮತ್ತು ಗಣ್ಯರ ಸುರಕ್ಷತೆಗಾಗಿ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಂದೋಬಸ್ತ್ ಮತ್ತು ಭದ್ರತಾ ಕರ್ತವ್ಯಕ್ಕಾಗಿ ಉಡುಪಿ ಜಿಲ್ಲೆ ಸೇರಿದಂತೆ ನೆರೆಯ ಜಿಲ್ಲೆಗಳಿಂದ ದೊಡ್ಡ ಪ್ರಮಾಣದಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಎನ್ನಲಾಗಿದೆ.

ಅಲ್ಲದೇ, ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಶ್ರೀಕೃಷ್ಣ ಮಠದ ಸುತ್ತಮುತ್ತಲೂ 70 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಸಾರ್ವಜನಿಕರಿಗೆ ಸಹಾಯ ಮಾಡಲು ಹಾಗೂ ತುರ್ತು ಪರಿಸ್ಥಿತಿಗಳಿಗೆ ತಕ್ಷಣ ಸ್ಪಂದಿಸಲು ಮಠದ ಬಳಿ ತಾತ್ಕಾಲಿಕ ಪೊಲೀಸ್ ಸಹಾಯ ಕೇಂದ್ರಗಳನ್ನೂ ಸ್ಥಾಪಿಸಲಾಗಿದೆ. ಈ ನಿಯೋಜನೆಯಲ್ಲಿ, 1 ಪೊಲೀಸ್ ಅಧೀಕ್ಷಕರು, 1 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 8 ಉಪ ಪೊಲೀಸ್ ಅಧೀಕ್ಷಕರು, 21 ಪೊಲೀಸ್ ಇನ್ಸ್ಪೆಕ್ಟರ್ಗಳು, 61 ಸಬ್ ಇನ್ಸ್ಪೆಕ್ಟರ್ಗಳು 110 ಎಎಸ್ಐಗಳು, 812 ಪೊಲೀಸ್ ಸಿಬ್ಬಂದಿ, 200 ಗೃಹರಕ್ಷಕರು, ಇದಕ್ಕೆ ಜೊತೆಗೆ 4 ಕೆಎಸ್ಆರ್ಪಿ (ಕರ್ನಾಟಕ ರಾಜ್ಯ ಮೀಸಲು ಪೊಲೀಸ್) ಘಟಕಗಳು, 14 ಜಿಲ್ಲಾ ಸಶಸ್ತ್ರ ಮೀಸಲು ಪಡೆ ಇತ್ಯಾದಿ ತಂಡಗಳನ್ನು ಸಂಖ್ಯೆಯನುಸಾರ ನಿಯೋಜಿಸಲಾಗಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರು, ಪರ್ಯಾಯ ಮಹೋತ್ಸವವು ಎರಡು ವರ್ಷಕ್ಕೊಮ್ಮೆ ನಡೆಯುವ ಪ್ರಮುಖ ಧಾರ್ಮಿಕ ಕಾರ್ಯಕ್ರಮ ಎಂದು ತಿಳಿಸಿದರು. ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಲಾಗಿದ್ದು, ಇತರೆ ಜಿಲ್ಲೆಗಳಿಂದ 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಕರೆತರಲಾಗಿದೆ. ಒಟ್ಟಾರೆ 1,000ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಮತ್ತು ಗೃಹರಕ್ಷಕರು ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ : Belthangadi : ಧರ್ಮಸ್ಥಳದ ವಿರುದ್ಧ ನಿಂದನೆ ಆರೋಪ: ಸೌಜನ್ಯಳ ಮಾವನಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

