ಬೆಂಗಳೂರು: ಇಂದು ಶುಕ್ರವಾರ, ವರಮಹಾಲಕ್ಷ್ಮಿಯ ಆಶೀರ್ವಾದ ಪಡೆಯುವ ದಿನ. ಗ್ರಹಗತಿಗಳ ಬದಲಾವಣೆಯಿಂದಾಗಿ ಇಂದು ಕೆಲವು ರಾಶಿಗಳಿಗೆ ವ್ಯಾಪಾರದಲ್ಲಿ ಲಾಭವಾದರೆ, ಇನ್ನು ಕೆಲವರು ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಬೇಕಿದೆ.
ಮೇಷ: ಇಂದು ನಿಮಗೆ ಕೆಲಸದ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ಸಿಗಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣವಿರುತ್ತದೆ.

ವೃಷಭ: ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಹಳೆಯ ಬಾಕಿ ವಸೂಲಿಯಾಗುವ ಸಾಧ್ಯತೆ ಇದೆ. ಸಂಜೆ ಶುಭ ಸುದ್ದಿ ಕೇಳುವಿರಿ.
ಮಿಥುನ: ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಪ್ರಯಾಣದಲ್ಲಿ ಜಾಗ್ರತೆ ವಹಿಸಿ.
ಕರ್ಕಾಟಕ: ದಾಂಪತ್ಯ ಜೀವನ ಮಧುರವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಪ್ರಗತಿ ಕಂಡುಬರಲಿದೆ.
ಸಿಂಹ: ಇಂದು ನೀವು ಕೈಹಾಕಿದ ಕೆಲಸಗಳಲ್ಲಿ ಜಯ ಸಿಗಲಿದೆ. ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ.
ಕನ್ಯಾ: ವ್ಯಾಪಾರಸ್ಥರಿಗೆ ಲಾಭದಾಯಕ ದಿನ. ಶತ್ರುಗಳ ಮೇಲೆ ವಿಜಯ ಸಾಧಿಸುವಿರಿ. ಹಿರಿಯರ ಆಶೀರ್ವಾದ ಪಡೆಯಿರಿ.
ತುಲಾ: ಮಾನಸಿಕ ಒತ್ತಡ ಕಡಿಮೆಯಾಗಲಿದೆ. ಹೊಸ ಹೂಡಿಕೆಗೆ ಇಂದು ಸೂಕ್ತ ದಿನವಲ್ಲ, ಸ್ವಲ್ಪ ಕಾಯಿರಿ.
ವೃಶ್ಚಿಕ: ವೃತ್ತಿಜೀವನದಲ್ಲಿ ಸವಾಲುಗಳು ಎದುರಾಗಬಹುದು. ತಾಳ್ಮೆಯಿಂದ ವರ್ತಿಸಿ. ಸಂಗಾತಿಯ ಬೆಂಬಲ ಸಿಗಲಿದೆ.
ಧನು: ಮನೆಯಲ್ಲಿ ಮಂಗಳ ಕಾರ್ಯಗಳು ಜರುಗುವ ಸಾಧ್ಯತೆ ಇದೆ. ಆಸ್ತಿ ವಿಚಾರದಲ್ಲಿ ಲಾಭವಾಗಲಿದೆ.
ಮಕರ: ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಿಗೆ ಯಶಸ್ಸು ಸಿಗಲಿದೆ. ಆಪ್ತ ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕುಂಭ: ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಆರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರವಿರಲಿ.
ಮೀನ: ಧನ ಲಾಭದ ಯೋಗವಿದೆ. ಮಕ್ಕಳಿಂದ ಸಂತಸದ ಸುದ್ದಿ ಕೇಳುವಿರಿ. ಹೊಸ ಯೋಜನೆಗಳಿಗೆ ಚಾಲನೆ ನೀಡಬಹುದು.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

